ಕ್ರೀಡೆ

ಇಂಡೋ-ವಿಂಡೀಸ್‌ ದ್ವಿತೀಯ ಟೆಸ್ಟ್‌: ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ವೇಗದ ಬೌಲಿಂಗ್‌ ಆಲ್‌ರೌಂಡರ್ ಶಾರ್ದುಲ್‌ ಠಾಕೂರ್‌ ಅವರು ಸಂಪೂರ್ಣ ಫಿಟ್‌ ಇಲ್ಲದ ಕಾರಣ ಅವರ ಬದಲು ಟ್ರಿನಿಡಾಡ್‌ ಟೆಸ್ಟ್‌ ಪಂದ್ಯಕ್ಕೆ ಮುಖೇಶ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಮೊದಲನೇ ಪಂದ್ಯವಾಡಿದ್ದ ಅದೇ ಆಟಗಾರನನ್ನು ಎರಡನೇ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ವೆಸ್ಟ್ ಇಂಡೀಸ್‌ ತಂಡಕ್ಕೆ ಶೆನನ್‌ ಗ್ಯಾಬ್ರಿಯಲ್‌ ಮರಳಿದ್ದು, ಕಿರ್ಕ್‌ ಮೆಕೆಂಜಿ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಇನ್ನು ಮೊದಲನೃ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ. ಆದರೆ, ಮೊದಲನೇ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆತಿಥೇಯ ವೆಸ್ಟ್ ಇಂಡೀಸ್‌ ತಂಡ, ಎರಡನೇ ಟೆಸ್ಟ್‌ ಗೆದ್ದು ಟೆಸ್ಟ್‌ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ವಿರಾಟ್‌ ದಾಖಲೆ:  ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದು ಕಿಂಗ್‌ ಎನಿಸಿಕೊಂಡಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದೀಗ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ರನ್ ಮಷೀನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.

ಎಲೈಟ್‌ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ ಕೊಹ್ಲಿ

ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಎಂಎಸ್‌ ಧೋನಿ ಹಾಗೂ ರಾಹುಲ್‌ ದ್ರಾವಿಡ್‌ ಅವರನ್ನೊಳಗೊಂಡ ಎಲೈಟ್‌ ಪಟ್ಟಿಗೆ ವಿರಾಟ್‌ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಾಡಿದ ಆಟಗಾರರು

ಸಚಿನ್‌ ತೆಂಡೂಲ್ಕರ್‌-664
ಎಂಎಸ್‌ ಧೋನಿ-535
ರಾಹುಲ್‌ ದ್ರಾವಿಡ್‌-504
ವಿರಾಟ್‌ ಕೊಹ್ಲಿ-499
ರೋಹಿತ್‌ ಶರ್ಮಾ-442

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕಟ್‌, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago