ಕ್ರೀಡೆ

ಇಂಡೋ-ವಿಂಡೀಸ್‌ ದ್ವಿತೀಯ ಟೆಸ್ಟ್‌: ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ವೇಗದ ಬೌಲಿಂಗ್‌ ಆಲ್‌ರೌಂಡರ್ ಶಾರ್ದುಲ್‌ ಠಾಕೂರ್‌ ಅವರು ಸಂಪೂರ್ಣ ಫಿಟ್‌ ಇಲ್ಲದ ಕಾರಣ ಅವರ ಬದಲು ಟ್ರಿನಿಡಾಡ್‌ ಟೆಸ್ಟ್‌ ಪಂದ್ಯಕ್ಕೆ ಮುಖೇಶ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಮೊದಲನೇ ಪಂದ್ಯವಾಡಿದ್ದ ಅದೇ ಆಟಗಾರನನ್ನು ಎರಡನೇ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ವೆಸ್ಟ್ ಇಂಡೀಸ್‌ ತಂಡಕ್ಕೆ ಶೆನನ್‌ ಗ್ಯಾಬ್ರಿಯಲ್‌ ಮರಳಿದ್ದು, ಕಿರ್ಕ್‌ ಮೆಕೆಂಜಿ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಇನ್ನು ಮೊದಲನೃ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ. ಆದರೆ, ಮೊದಲನೇ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆತಿಥೇಯ ವೆಸ್ಟ್ ಇಂಡೀಸ್‌ ತಂಡ, ಎರಡನೇ ಟೆಸ್ಟ್‌ ಗೆದ್ದು ಟೆಸ್ಟ್‌ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ವಿರಾಟ್‌ ದಾಖಲೆ:  ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದು ಕಿಂಗ್‌ ಎನಿಸಿಕೊಂಡಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದೀಗ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ರನ್ ಮಷೀನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.

ಎಲೈಟ್‌ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ ಕೊಹ್ಲಿ

ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಎಂಎಸ್‌ ಧೋನಿ ಹಾಗೂ ರಾಹುಲ್‌ ದ್ರಾವಿಡ್‌ ಅವರನ್ನೊಳಗೊಂಡ ಎಲೈಟ್‌ ಪಟ್ಟಿಗೆ ವಿರಾಟ್‌ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಾಡಿದ ಆಟಗಾರರು

ಸಚಿನ್‌ ತೆಂಡೂಲ್ಕರ್‌-664
ಎಂಎಸ್‌ ಧೋನಿ-535
ರಾಹುಲ್‌ ದ್ರಾವಿಡ್‌-504
ವಿರಾಟ್‌ ಕೊಹ್ಲಿ-499
ರೋಹಿತ್‌ ಶರ್ಮಾ-442

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕಟ್‌, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

19 mins ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

5 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

5 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

10 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

10 hours ago