ಕ್ರೀಡೆ

ಇಂಡೋನೇಷ್ಯಾ ಓಪನ್‌ 2023: ಗೆದ್ದು ದಾಖಲೆ ಬರೆದ ಸಾತ್ವಿಕ್‌ ರಾಂಕಿರೆಡ್ಡಿ – ಚಿರಾಗ್ ಶೆಟ್ಟಿ

ಜಕಾರ್ತಾ: ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್‌ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು.

ಇಂಡೋನೇಷ್ಯಾ ಓಪನ್‌ ನ ಪುರುಷರ ಡಬಲ್ಸ್ ಫೈನಲ್‌ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು.

ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್‌ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ ತಮ್ಮ ಮೊದಲ ಸೂಪರ್ 1000 ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದರು.

ಪ್ರಸಕ್ತ ವಿಶ್ವ ಚಾಂಪಿಯನ್ಸ್ ಮಲೇಷ್ಯಾ ಜೋಡಿಯನ್ನು ಏಷ್ಯನ್ ಚಾಂಪಿಯನ್ ಕೂಡ ಆಗಿರುವ ಭಾರತೀಯರು ಕೇವಲ 43 ನಿಮಿಷಗಳಲ್ಲಿ ಸೋಲಿಸಿದರು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

8 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

8 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

8 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

9 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

9 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

11 hours ago