ಕ್ರೀಡೆ

ಇಂಡೋನೇಷ್ಯಾ ಓಪನ್‌ 2023: ಗೆದ್ದು ದಾಖಲೆ ಬರೆದ ಸಾತ್ವಿಕ್‌ ರಾಂಕಿರೆಡ್ಡಿ – ಚಿರಾಗ್ ಶೆಟ್ಟಿ

ಜಕಾರ್ತಾ: ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್‌ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು.

ಇಂಡೋನೇಷ್ಯಾ ಓಪನ್‌ ನ ಪುರುಷರ ಡಬಲ್ಸ್ ಫೈನಲ್‌ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು.

ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್‌ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ ತಮ್ಮ ಮೊದಲ ಸೂಪರ್ 1000 ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದರು.

ಪ್ರಸಕ್ತ ವಿಶ್ವ ಚಾಂಪಿಯನ್ಸ್ ಮಲೇಷ್ಯಾ ಜೋಡಿಯನ್ನು ಏಷ್ಯನ್ ಚಾಂಪಿಯನ್ ಕೂಡ ಆಗಿರುವ ಭಾರತೀಯರು ಕೇವಲ 43 ನಿಮಿಷಗಳಲ್ಲಿ ಸೋಲಿಸಿದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago