ಕ್ರೀಡೆ

INS vs NZ | ಮಿಚೆಲ್‌ ಅಬ್ಬರಕ್ಕೆ ರಾಹುಲ್‌ ಶತಕ ವ್ಯರ್ಥ : ಭಾರತಕ್ಕೆ ಸೋಲು

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಜಯ ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ. ಇದರೊಂದಿಗೆ ಕನ್ನಡಿಗ ಕೆ.ಎಲ್. ರಾಹುಲ್ (112) ಅವರ ಶಕತವು ವ್ಯರ್ಥವಾಗಿದೆ.

ಭಾರತ ಒಡ್ಡಿದ 285 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 47.3 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ನ್ಯೂಜಿಲೆಂಡ್ ಆರಂಭಿಕ ಆಘಾತ ಅನುಭವಿಸಿದರೂ ಮೂರನೇ ವಿಕೆಟ್ಗೆ 167 ರನ್‌ಗಳ ಜೊತೆಯಾಟ ಕಟ್ಟಿದ ಡೆರಿಲ್ ಮಿಚೆಲ್ ಹಾಗೂ ವಿಲ್ ಯಂಗ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆಕ್ರಮಣಕಾರಿ ಆಟ ಪ್ರದರ್ಶಿಸಿದ ಮಿಚೆಲ್ ಅಮೋಘ ಶತಕ ಸಾಧನೆ ಮಾಡಿದರು. 117 ಎಸೆತಗಳಲ್ಲಿ 131 ರನ್ ಗಳಿಸಿ (11 ಬೌಂಡರಿ, 2 ಸಿಕ್ಸರ್) ಔಟಾಗದೆ ಉಳಿದರು. ಅವರಿಗೆ ಸಾಥ್ ನೀಡಿದ ವಿಲ್ ಯಂಗ್ 87 ರನ್ ಗಳಿಸಿ ಔಟ್ ಆದರು. 98 ಎಸೆತಗಳನ್ನು ಎದುರಿಸಿದ ಯಂಗ್ ಇನಿಂಗ್ಸ್‌ನಲ್ಲಿ ಏಳು ಬೌಂಡರಿಗಳು ಸೇರಿದ್ದವು. ಕೊನೆಯಲ್ಲಿ ಗ್ಲೆನ್ ಪಿಲಿಫ್ಸ್ ಅಜೇಯ 32 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಭಾರತದ ಪರ ಹರ್ಷೀತ್ ರಾಣಾ, ಪ್ರಸಿದ್ಧ ಕೃಷ್ಣ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು. ವಡೋದರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು. ಸರಣಿಯ ಕೊನೆಯ ಪಂದ್ಯವು ಜ.18ರಂದು ಇಂದೋರ್‌ನಲ್ಲಿ ನಡೆಯಲಿದೆ.

ಈ ಮೊದಲು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿತು. ರಾಜ್ಕೋಟ್ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು, ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಭಾರತದ ಪರ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 24 ರನ್ (38 ಎಸೆತ) ಮತ್ತೆ ನಿರಾಸೆ ಅನುಭವಿಸಿದರು. ಅತ್ಯುತ್ತಮ ಲಯದಲ್ಲಿದ್ದ ವಿರಾಟ್ ಕೊಹ್ಲಿ (23 ರನ್; 29 ಎಸೆತ) ಕೂಡ ಬೇಗನೇ ವಿಕೆಟ್ ಒಪ್ಪಿಸಿದರು. ನಾಯಕ ಶುಭಮನ್ ಗಿಲ್ (56 ರನ್; 53 ಎಸೆತ) ಅರ್ಧಶಕತ ಸಿಡಿಸಿ, ಕೈಲ್ ಜೇಮಿಸನ್ಗೆ ವಿಕೆಟ್ ಒಪ್ಪಿಸಿದರು. ಶ್ರೇಯಸ್ ಐಯ್ಯರ್ ಕೇವಲ 8 ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.

ಭಾರತದ ಬ್ಯಾಟರ್ಗಳು ಆರಂಭದಲ್ಲಿ ರನ್ ಗಳಿಸಲು ಪರದಾಡಿದರು. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರು ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಜೇಯ 112 ರನ್ (92 ಎಸೆತ) ಬಾರಿಸಿದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ರವೀಂದ್ರ ಜಡೇಜಾ (27 ರನ್) ಹಾಗೂ ನಿತೀಶ್ ಕುಮಾರ್ ರೆಡ್ಡಿ (20 ರನ್) ಕೆಲಕಾಲ ರಾಹುಲ್ಗೆ ಸಾಥ್ ನೀಡಿದರು. ನ್ಯೂಜಿಲೆಂಡ್ ಪರ ವೇಗದ ಬೌಲರ್ ಕ್ರಿಸ್ಟಿಯನ್ ಕ್ಲಾರ್ಕ್ 3 ವಿಕೆಟ್ ಪಡೆದು ಮಿಂಚಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

5 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago