ರಾಜ್ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಜಯ ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ. ಇದರೊಂದಿಗೆ ಕನ್ನಡಿಗ ಕೆ.ಎಲ್. ರಾಹುಲ್ (112) ಅವರ ಶಕತವು ವ್ಯರ್ಥವಾಗಿದೆ.
ಭಾರತ ಒಡ್ಡಿದ 285 ರನ್ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 47.3 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ನ್ಯೂಜಿಲೆಂಡ್ ಆರಂಭಿಕ ಆಘಾತ ಅನುಭವಿಸಿದರೂ ಮೂರನೇ ವಿಕೆಟ್ಗೆ 167 ರನ್ಗಳ ಜೊತೆಯಾಟ ಕಟ್ಟಿದ ಡೆರಿಲ್ ಮಿಚೆಲ್ ಹಾಗೂ ವಿಲ್ ಯಂಗ್ ತಂಡವನ್ನು ಗೆಲುವಿನ ದಡ ಸೇರಿಸಿದರು.
ಆಕ್ರಮಣಕಾರಿ ಆಟ ಪ್ರದರ್ಶಿಸಿದ ಮಿಚೆಲ್ ಅಮೋಘ ಶತಕ ಸಾಧನೆ ಮಾಡಿದರು. 117 ಎಸೆತಗಳಲ್ಲಿ 131 ರನ್ ಗಳಿಸಿ (11 ಬೌಂಡರಿ, 2 ಸಿಕ್ಸರ್) ಔಟಾಗದೆ ಉಳಿದರು. ಅವರಿಗೆ ಸಾಥ್ ನೀಡಿದ ವಿಲ್ ಯಂಗ್ 87 ರನ್ ಗಳಿಸಿ ಔಟ್ ಆದರು. 98 ಎಸೆತಗಳನ್ನು ಎದುರಿಸಿದ ಯಂಗ್ ಇನಿಂಗ್ಸ್ನಲ್ಲಿ ಏಳು ಬೌಂಡರಿಗಳು ಸೇರಿದ್ದವು. ಕೊನೆಯಲ್ಲಿ ಗ್ಲೆನ್ ಪಿಲಿಫ್ಸ್ ಅಜೇಯ 32 ರನ್ಗಳ ಉಪಯುಕ್ತ ಕಾಣಿಕೆ ನೀಡಿದರು. ಭಾರತದ ಪರ ಹರ್ಷೀತ್ ರಾಣಾ, ಪ್ರಸಿದ್ಧ ಕೃಷ್ಣ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು. ವಡೋದರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು. ಸರಣಿಯ ಕೊನೆಯ ಪಂದ್ಯವು ಜ.18ರಂದು ಇಂದೋರ್ನಲ್ಲಿ ನಡೆಯಲಿದೆ.
ಈ ಮೊದಲು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿತು. ರಾಜ್ಕೋಟ್ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು, ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಭಾರತದ ಪರ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 24 ರನ್ (38 ಎಸೆತ) ಮತ್ತೆ ನಿರಾಸೆ ಅನುಭವಿಸಿದರು. ಅತ್ಯುತ್ತಮ ಲಯದಲ್ಲಿದ್ದ ವಿರಾಟ್ ಕೊಹ್ಲಿ (23 ರನ್; 29 ಎಸೆತ) ಕೂಡ ಬೇಗನೇ ವಿಕೆಟ್ ಒಪ್ಪಿಸಿದರು. ನಾಯಕ ಶುಭಮನ್ ಗಿಲ್ (56 ರನ್; 53 ಎಸೆತ) ಅರ್ಧಶಕತ ಸಿಡಿಸಿ, ಕೈಲ್ ಜೇಮಿಸನ್ಗೆ ವಿಕೆಟ್ ಒಪ್ಪಿಸಿದರು. ಶ್ರೇಯಸ್ ಐಯ್ಯರ್ ಕೇವಲ 8 ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.
ಭಾರತದ ಬ್ಯಾಟರ್ಗಳು ಆರಂಭದಲ್ಲಿ ರನ್ ಗಳಿಸಲು ಪರದಾಡಿದರು. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರು ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಜೇಯ 112 ರನ್ (92 ಎಸೆತ) ಬಾರಿಸಿದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ರವೀಂದ್ರ ಜಡೇಜಾ (27 ರನ್) ಹಾಗೂ ನಿತೀಶ್ ಕುಮಾರ್ ರೆಡ್ಡಿ (20 ರನ್) ಕೆಲಕಾಲ ರಾಹುಲ್ಗೆ ಸಾಥ್ ನೀಡಿದರು. ನ್ಯೂಜಿಲೆಂಡ್ ಪರ ವೇಗದ ಬೌಲರ್ ಕ್ರಿಸ್ಟಿಯನ್ ಕ್ಲಾರ್ಕ್ 3 ವಿಕೆಟ್ ಪಡೆದು ಮಿಂಚಿದರು.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…