ಬೆಂಗಳೂರು: ಐಪಿಎಲ್ 2023 ಟೂರ್ನಿಯಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಕಾಣಿಸಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ.
ಟ್ರೆಂಟ್ ಬೋಲ್ಟ್ ಮೊದಲ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ್ದಾರೆ. ಈ ಮೂಲಕ ಖಾತೆ ತೆರೆಯುವ ಮುನ್ನವೇ ಕೊಹ್ಲಿ ಪೆವಿಲಿಯನ್ ಸೇರಿದ್ದಾರೆ. ಕೊಹ್ಲಿ ಫಾರ್ಮ್ ಕುರಿತು ಅಭಿಮಾನಿಗಳು ಆತಂಕ ಪಡಬೇಕಿಲ್ಲ. ಕಾರಣ ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಸಿಡಿಸಿಲ್ಲ. ಶೂನ್ಯಕ್ಕೆ ಔಟಾಗಿದ್ದಾರೆ ಈ ಹಿಂದಿನ ಆವೃತ್ತಿಗಳಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರ.
ವಿರಾಟ್ ಕೊಹ್ಲಿಗೂ ಏಪ್ರಿಲ್ 23 ಆಗಿಬರಲ್ಲ. ಈ ದಿನ ಕೊಹ್ಲಿ ಕರಿಯರ್ನಲ್ಲಿ ನೆನಪಿಸಿಕೊಳ್ಳಲು ಬಯಸದ ದಿನವಾಗಿದೆ. ಐಪಿಎಲ್ ಟೂರ್ನಿಯಲ್ಲಿ ಏಪ್ರಿಲ್ 23 ರಂದು ಆಡಿದ ಪ್ರತಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ. ಈ ಸಂಪ್ರದಾಯ ಇಂದು ಕೂಡ ಮುಂದುವರಿದಿದೆ.
ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ
2017, ಎಪ್ರಿಲ್ 23, 0(1)
2022, ಎಪ್ರಿಲ್ 23, 0(1)
2023, ಎಪ್ರಿಲ್ 23, 0(1)
ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಖಾತೆ ತೆರೆದಿಲ್ಲ. ಇಷ್ಟೇ ಅಲ್ಲ ಆರ್ಸಿಬಿಗೂ ಸಂಕಷ್ಟ ತಪ್ಪಿಲ್ಲ, ಕಳೆದ ಎರಡು ಬಾರಿ ಏಪ್ರಿಲ್ 23ರ ಪಂದ್ಯದಲ್ಲಿ ಆರ್ಸಿಸಿಬಿ ಮುಗ್ಗರಿಸಿದೆ. 2017ರಲ್ಲಿ ಎಪ್ರಿಲ್ 23 ರಂದು ಆರ್ಸಿಬಿ , ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ ನೈಟ್ ರೈಡರ್ಸ್ 19.3 ಓವರ್ಗಳಲ್ಲಿ 131 ರನ್ಗೆ ಆಲೌಟ್ ಆಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸುಲಭ ಟಾರ್ಗೆಟ್ ಪಡೆದಿತ್ತು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಓವರ್ನ ಆರಂಭಿಕ ಎರಡು ಎಸೆತ ಕ್ರಿಸ್ ಗೇಲ್ ಎದುರಿಸಿದ್ದರೆ, 3ನೇ ಎಸೆತವನ್ನು ಕೊಹ್ಲಿ ಎದುರಿಸಿದ್ದರು. ಕೊಹ್ಲಿ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದರು. ಕೊಹ್ಲಿ 1 ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಇತ್ತ ಆರ್ಸಿಬಿ 49 ರನ್ಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.
ಎಪ್ರಿಲ್ 23, 2022ರಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಹೋರಾಟ ನಡೆಸಿತ್ತು. ಮೊದಲ ಕ್ರಮಾಂಕದಲ್ಲಿ ಕಣಕ್ಕಿಳಿದಿತ್ತು ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ಔಟಾದರು. ಇಲ್ಲೂ ಕೂಡ ಕೊಹ್ಲಿ ಒಂದು ಎಸೆತ ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು. ಈ ಪಂದ್ಯದಲ್ಲಿ ಆರ್ಸಿಬಿ 16.1 ಓವರ್ಗಳಲ್ಲಿ ಕೇವಲ 68 ರನ್ಗೆ ಆಲೌಟ್ ಆಗಿತ್ತು. ಸುಲಭ ಟಾರ್ಗೆಟ್ನ್ನು ಹೈದರಾಬಾದ್ 8 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತ್ತು.
ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್ವೆಲ್ ಹೋರಾಟದಿಂದ ಆರ್ಸಿಬಿ ಚೇತರಿಸಿಕೊಂಡಿದೆ. ಏಪ್ರಿಲ್ 23 ರಂದು ಆರ್ಸಿಬಿ ಆಡಿದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಆದರೆ ಈ ಬಾರಿ ಈ ಸಂಪ್ರದಾಯ ಬದಲಾಗುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…