ಕ್ರೀಡೆ

IPL 2023 : ಏಪ್ರಿಲ್ 23 ಕೊಹ್ಲಿಗೆ ಅನ್‌ಲಕ್ಕಿ, ಈ ದಿನ ಶೂನ್ಯಕ್ಕೆ ಔಟಾಗಿದ್ದೇ ಹೆಚ್ಚು!

ಬೆಂಗಳೂರು: ಐಪಿಎಲ್ 2023 ಟೂರ್ನಿಯಲ್ಲಿ ಆರ್‌ಸಿಬಿ ಗ್ರೀನ್ ಜರ್ಸಿಯಲ್ಲಿ ಕಾಣಿಸಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ.

ಟ್ರೆಂಟ್ ಬೋಲ್ಟ್ ಮೊದಲ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ್ದಾರೆ. ಈ ಮೂಲಕ ಖಾತೆ ತೆರೆಯುವ ಮುನ್ನವೇ ಕೊಹ್ಲಿ ಪೆವಿಲಿಯನ್ ಸೇರಿದ್ದಾರೆ. ಕೊಹ್ಲಿ ಫಾರ್ಮ್ ಕುರಿತು ಅಭಿಮಾನಿಗಳು ಆತಂಕ ಪಡಬೇಕಿಲ್ಲ. ಕಾರಣ ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಸಿಡಿಸಿಲ್ಲ. ಶೂನ್ಯಕ್ಕೆ ಔಟಾಗಿದ್ದಾರೆ ಈ ಹಿಂದಿನ ಆವೃತ್ತಿಗಳಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರ.

ವಿರಾಟ್ ಕೊಹ್ಲಿಗೂ ಏಪ್ರಿಲ್ 23 ಆಗಿಬರಲ್ಲ. ಈ ದಿನ ಕೊಹ್ಲಿ ಕರಿಯರ್‌ನಲ್ಲಿ ನೆನಪಿಸಿಕೊಳ್ಳಲು ಬಯಸದ ದಿನವಾಗಿದೆ. ಐಪಿಎಲ್ ಟೂರ್ನಿಯಲ್ಲಿ ಏಪ್ರಿಲ್ 23 ರಂದು ಆಡಿದ ಪ್ರತಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ. ಈ ಸಂಪ್ರದಾಯ ಇಂದು ಕೂಡ ಮುಂದುವರಿದಿದೆ.

ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ
2017, ಎಪ್ರಿಲ್ 23,  0(1)
2022, ಎಪ್ರಿಲ್ 23, 0(1)
2023, ಎಪ್ರಿಲ್ 23, 0(1)

ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಖಾತೆ ತೆರೆದಿಲ್ಲ. ಇಷ್ಟೇ ಅಲ್ಲ ಆರ್‌ಸಿಬಿಗೂ ಸಂಕಷ್ಟ ತಪ್ಪಿಲ್ಲ, ಕಳೆದ ಎರಡು ಬಾರಿ ಏಪ್ರಿಲ್ 23ರ ಪಂದ್ಯದಲ್ಲಿ ಆರ್‌ಸಿಸಿಬಿ ಮುಗ್ಗರಿಸಿದೆ. 2017ರಲ್ಲಿ ಎಪ್ರಿಲ್ 23 ರಂದು ಆರ್‌ಸಿಬಿ , ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ ನೈಟ್ ರೈಡರ್ಸ್ 19.3 ಓವರ್‌ಗಳಲ್ಲಿ 131 ರನ್‌ಗೆ ಆಲೌಟ್ ಆಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸುಲಭ ಟಾರ್ಗೆಟ್ ಪಡೆದಿತ್ತು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಓವರ್‌ನ ಆರಂಭಿಕ ಎರಡು ಎಸೆತ ಕ್ರಿಸ್ ಗೇಲ್ ಎದುರಿಸಿದ್ದರೆ, 3ನೇ ಎಸೆತವನ್ನು ಕೊಹ್ಲಿ ಎದುರಿಸಿದ್ದರು. ಕೊಹ್ಲಿ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದರು. ಕೊಹ್ಲಿ 1 ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಇತ್ತ ಆರ್‌ಸಿಬಿ 49 ರನ್‌ಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.

ಎಪ್ರಿಲ್ 23, 2022ರಲ್ಲಿ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಹೋರಾಟ ನಡೆಸಿತ್ತು. ಮೊದಲ ಕ್ರಮಾಂಕದಲ್ಲಿ ಕಣಕ್ಕಿಳಿದಿತ್ತು ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ಔಟಾದರು. ಇಲ್ಲೂ ಕೂಡ ಕೊಹ್ಲಿ ಒಂದು ಎಸೆತ ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು. ಈ ಪಂದ್ಯದಲ್ಲಿ ಆರ್‌ಸಿಬಿ 16.1 ಓವರ್‌ಗಳಲ್ಲಿ ಕೇವಲ 68 ರನ್‌ಗೆ ಆಲೌಟ್ ಆಗಿತ್ತು. ಸುಲಭ ಟಾರ್ಗೆಟ್‌ನ್ನು ಹೈದರಾಬಾದ್ 8 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತ್ತು.

ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್‌ವೆಲ್ ಹೋರಾಟದಿಂದ ಆರ್‌ಸಿಬಿ ಚೇತರಿಸಿಕೊಂಡಿದೆ. ಏಪ್ರಿಲ್ 23 ರಂದು ಆರ್‌ಸಿಬಿ ಆಡಿದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಆದರೆ ಈ ಬಾರಿ ಈ ಸಂಪ್ರದಾಯ ಬದಲಾಗುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ.

andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

12 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

12 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

13 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

14 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

14 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

17 hours ago