ಬೆಂಗಳೂರು: ಐಪಿಎಲ್ 2023 ಟೂರ್ನಿಯಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಕಾಣಿಸಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ.
ಟ್ರೆಂಟ್ ಬೋಲ್ಟ್ ಮೊದಲ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ್ದಾರೆ. ಈ ಮೂಲಕ ಖಾತೆ ತೆರೆಯುವ ಮುನ್ನವೇ ಕೊಹ್ಲಿ ಪೆವಿಲಿಯನ್ ಸೇರಿದ್ದಾರೆ. ಕೊಹ್ಲಿ ಫಾರ್ಮ್ ಕುರಿತು ಅಭಿಮಾನಿಗಳು ಆತಂಕ ಪಡಬೇಕಿಲ್ಲ. ಕಾರಣ ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಸಿಡಿಸಿಲ್ಲ. ಶೂನ್ಯಕ್ಕೆ ಔಟಾಗಿದ್ದಾರೆ ಈ ಹಿಂದಿನ ಆವೃತ್ತಿಗಳಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರ.
ವಿರಾಟ್ ಕೊಹ್ಲಿಗೂ ಏಪ್ರಿಲ್ 23 ಆಗಿಬರಲ್ಲ. ಈ ದಿನ ಕೊಹ್ಲಿ ಕರಿಯರ್ನಲ್ಲಿ ನೆನಪಿಸಿಕೊಳ್ಳಲು ಬಯಸದ ದಿನವಾಗಿದೆ. ಐಪಿಎಲ್ ಟೂರ್ನಿಯಲ್ಲಿ ಏಪ್ರಿಲ್ 23 ರಂದು ಆಡಿದ ಪ್ರತಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕೌಟ್ ಆಗಿದ್ದಾರೆ. ಈ ಸಂಪ್ರದಾಯ ಇಂದು ಕೂಡ ಮುಂದುವರಿದಿದೆ.
ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ
2017, ಎಪ್ರಿಲ್ 23, 0(1)
2022, ಎಪ್ರಿಲ್ 23, 0(1)
2023, ಎಪ್ರಿಲ್ 23, 0(1)
ಏಪ್ರಿಲ್ 23 ರಂದು ವಿರಾಟ್ ಕೊಹ್ಲಿ ರನ್ ಖಾತೆ ತೆರೆದಿಲ್ಲ. ಇಷ್ಟೇ ಅಲ್ಲ ಆರ್ಸಿಬಿಗೂ ಸಂಕಷ್ಟ ತಪ್ಪಿಲ್ಲ, ಕಳೆದ ಎರಡು ಬಾರಿ ಏಪ್ರಿಲ್ 23ರ ಪಂದ್ಯದಲ್ಲಿ ಆರ್ಸಿಸಿಬಿ ಮುಗ್ಗರಿಸಿದೆ. 2017ರಲ್ಲಿ ಎಪ್ರಿಲ್ 23 ರಂದು ಆರ್ಸಿಬಿ , ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ ನೈಟ್ ರೈಡರ್ಸ್ 19.3 ಓವರ್ಗಳಲ್ಲಿ 131 ರನ್ಗೆ ಆಲೌಟ್ ಆಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸುಲಭ ಟಾರ್ಗೆಟ್ ಪಡೆದಿತ್ತು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಓವರ್ನ ಆರಂಭಿಕ ಎರಡು ಎಸೆತ ಕ್ರಿಸ್ ಗೇಲ್ ಎದುರಿಸಿದ್ದರೆ, 3ನೇ ಎಸೆತವನ್ನು ಕೊಹ್ಲಿ ಎದುರಿಸಿದ್ದರು. ಕೊಹ್ಲಿ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದರು. ಕೊಹ್ಲಿ 1 ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಇತ್ತ ಆರ್ಸಿಬಿ 49 ರನ್ಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.
ಎಪ್ರಿಲ್ 23, 2022ರಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಹೋರಾಟ ನಡೆಸಿತ್ತು. ಮೊದಲ ಕ್ರಮಾಂಕದಲ್ಲಿ ಕಣಕ್ಕಿಳಿದಿತ್ತು ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ಔಟಾದರು. ಇಲ್ಲೂ ಕೂಡ ಕೊಹ್ಲಿ ಒಂದು ಎಸೆತ ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು. ಈ ಪಂದ್ಯದಲ್ಲಿ ಆರ್ಸಿಬಿ 16.1 ಓವರ್ಗಳಲ್ಲಿ ಕೇವಲ 68 ರನ್ಗೆ ಆಲೌಟ್ ಆಗಿತ್ತು. ಸುಲಭ ಟಾರ್ಗೆಟ್ನ್ನು ಹೈದರಾಬಾದ್ 8 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತ್ತು.
ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ವಿಕೆಟ್ ಕೈಚೆಲ್ಲಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್ವೆಲ್ ಹೋರಾಟದಿಂದ ಆರ್ಸಿಬಿ ಚೇತರಿಸಿಕೊಂಡಿದೆ. ಏಪ್ರಿಲ್ 23 ರಂದು ಆರ್ಸಿಬಿ ಆಡಿದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಆದರೆ ಈ ಬಾರಿ ಈ ಸಂಪ್ರದಾಯ ಬದಲಾಗುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…