ಕ್ರೀಡೆ

ಐಪಿಎಲ್‌ ಇತಿಹಾಸದಲ್ಲೇ ಅತಿಹೆಚ್ಚು ಬೆಲೆಗೆ ಹರಾಜಾದ ದಾಖಲೆ ಬರೆದ ಪ್ಯಾಟ್‌ ಕಮಿನ್ಸ್‌

ಇಂದು ( ಡಿಸೆಂಬರ್‌ 19 ) ದುಬೈನಲ್ಲಿ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ಸ್‌ ಕಮಿನ್ಸ್‌ ಬರೋಬ್ಬರಿ 20.50 ಕೋಟಿ ರೂಪಾಯಿಗಳಿಗೆ ಸನ್‌ರೈಸರ್ಸ್‌ ಹೈದರಾಬಾದ್‌ ಪಾಲಾಗಿದ್ದಾರೆ.

2 ಕೋಟಿ ರೂಪಾಯಿಗಳ ಮುಖಬೆಲೆಯೊಂದಿಗೆ ಹರಾಜಿಗೆ ಇಳಿದಿದ್ದ ವಿಶ್ವಕಪ್‌ ವಿನ್ನಿಂಗ್‌ ನಾಯಕನ ಖರೀದಿಗಾಗಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. 20.25 ಕೋಟಿ ರೂಪಾಯಿಗಳವರೆಗೂ ಬಿಡ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸನ್‌ ರೈಸರ್ಸ್‌ ಹೈದರಾಬಾದ್‌ 20.50 ಕೋಟಿ ಬಿಡ್‌ ಮಾಡಿದ ನಂತರ ರೇಸ್‌ನಿಂದ ಹಿಂದೆ ಸರಿಯಿತು.

ಈ ಮೂಲಕ ಈ ಹಿಂದೆ ಸ್ಯಾಮ್‌ ಕರನ್‌ ಹೆಸರಿನಲ್ಲಿದ್ದ ಅತಿಹೆಚ್ಚು ಮೊತ್ತಕ್ಕೆ ಬಿಡ್‌ ಆದ ಆಟಗಾರ ಎಂಬ ದಾಖಲೆಯನ್ನು ಪ್ಯಾಟ್ ಕಮಿನ್ಸ್‌ ಮುರಿದುಹಾಕಿದ್ದಾರೆ. ಕಳೆದ ಬಾರಿಯ ಹರಾಜಿನಲ್ಲಿ ಸ್ಯಾಮ್‌ ಕರನ್‌ ಅವರನ್ನು ಪಂಜಾಬ್ ಕಿಂಗ್ಸ್‌ ತಂಡ 18.5 ಕೋಟಿಗೆ ಖರೀದಿಸಿತ್ತು. ಇನ್ನು 2020ರ ಐಪಿಎಲ್‌ ಹರಾಜಿನಲ್ಲಿ ಪ್ಯಾಟ್‌ ಕಮಿನ್ಸ್‌ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ 15.5 ಕೋಟಿಗೆ ಬಿಕರಿಯಾಗಿದ್ದರು. 

andolana

Recent Posts

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

11 seconds ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

17 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

23 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

34 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

38 mins ago

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…

41 mins ago