ಕ್ರೀಡೆ

ಐಪಿಎಲ್‌ ಇತಿಹಾಸದಲ್ಲೇ ಅತಿಹೆಚ್ಚು ಬೆಲೆಗೆ ಹರಾಜಾದ ದಾಖಲೆ ಬರೆದ ಪ್ಯಾಟ್‌ ಕಮಿನ್ಸ್‌

ಇಂದು ( ಡಿಸೆಂಬರ್‌ 19 ) ದುಬೈನಲ್ಲಿ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ಸ್‌ ಕಮಿನ್ಸ್‌ ಬರೋಬ್ಬರಿ 20.50 ಕೋಟಿ ರೂಪಾಯಿಗಳಿಗೆ ಸನ್‌ರೈಸರ್ಸ್‌ ಹೈದರಾಬಾದ್‌ ಪಾಲಾಗಿದ್ದಾರೆ.

2 ಕೋಟಿ ರೂಪಾಯಿಗಳ ಮುಖಬೆಲೆಯೊಂದಿಗೆ ಹರಾಜಿಗೆ ಇಳಿದಿದ್ದ ವಿಶ್ವಕಪ್‌ ವಿನ್ನಿಂಗ್‌ ನಾಯಕನ ಖರೀದಿಗಾಗಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. 20.25 ಕೋಟಿ ರೂಪಾಯಿಗಳವರೆಗೂ ಬಿಡ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸನ್‌ ರೈಸರ್ಸ್‌ ಹೈದರಾಬಾದ್‌ 20.50 ಕೋಟಿ ಬಿಡ್‌ ಮಾಡಿದ ನಂತರ ರೇಸ್‌ನಿಂದ ಹಿಂದೆ ಸರಿಯಿತು.

ಈ ಮೂಲಕ ಈ ಹಿಂದೆ ಸ್ಯಾಮ್‌ ಕರನ್‌ ಹೆಸರಿನಲ್ಲಿದ್ದ ಅತಿಹೆಚ್ಚು ಮೊತ್ತಕ್ಕೆ ಬಿಡ್‌ ಆದ ಆಟಗಾರ ಎಂಬ ದಾಖಲೆಯನ್ನು ಪ್ಯಾಟ್ ಕಮಿನ್ಸ್‌ ಮುರಿದುಹಾಕಿದ್ದಾರೆ. ಕಳೆದ ಬಾರಿಯ ಹರಾಜಿನಲ್ಲಿ ಸ್ಯಾಮ್‌ ಕರನ್‌ ಅವರನ್ನು ಪಂಜಾಬ್ ಕಿಂಗ್ಸ್‌ ತಂಡ 18.5 ಕೋಟಿಗೆ ಖರೀದಿಸಿತ್ತು. ಇನ್ನು 2020ರ ಐಪಿಎಲ್‌ ಹರಾಜಿನಲ್ಲಿ ಪ್ಯಾಟ್‌ ಕಮಿನ್ಸ್‌ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ 15.5 ಕೋಟಿಗೆ ಬಿಕರಿಯಾಗಿದ್ದರು. 

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago