ಕ್ರೀಡೆ

IPL 2023: ಬಟ್ಲರ್, ಯಶಸ್ವಿ, ಸಂಜು ಮಿಂಚು: ರಾಜಸ್ಥಾನ ಶುಭಾರಂಭ

ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ ನಡೆದ ಐಪಿಎಲ್ 2023 ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 72 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಕಳೆದ ಬಾರಿದ ರನ್ನರ್-ಅಪ್ ರಾಜಸ್ಥಾನ ತಂಡವು ಶುಭಾರಂಭ ಮಾಡಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ ತಂಡವು ಐದು ವಿಕೆಟ್ ನಷ್ಟಕ್ಕೆ 203 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.

ಬಳಿಕ ಯಜುವೇಂದ್ರ ಚಾಹಲ್ (17ಕ್ಕೆ 4) ಹಾಗೂ ಟ್ರೆಂಟ್ ಬೌಲ್ಟ್ (21ಕ್ಕೆ 2) ದಾಳಿಗೆ ತತ್ತರಿಸಿದ ಹೈದರಾಬಾದ್ ಎಂಟು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ರಾಜಸ್ಥಾನ ಪರ ಆರಂಭಿಕರಾದ ಬಟ್ಲರ್ ಹಾಗೂ ಜೈಸ್ವಾಲ್ ಮೊದಲ ವಿಕೆಟ್‌ಗೆ 35 ಎಸೆತಗಳಲ್ಲೇ 85 ರನ್‌ಗಳ ಜೊತೆಯಾಟ ಕಟ್ಟಿದರು. ಕೇವಲ 22 ಎಸೆತಗಳನ್ನು ಎದುರಿಸಿದ ಬಟ್ಲರ್ 54 ರನ್ (7 ಬೌಂಡರಿ, 3 ಸಿಕ್ಸರ್) ಗಳಿಸಿ ಅಬ್ಬರಿಸಿದರು.

ಮತ್ತೊಂದೆಡೆ ಜೈಸ್ವಾಲ್ 37 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು.

ನಾಯಕನ ಆಟವಾಡಿದ ಸಂಜು 32 ಎಸೆತಗಳಲ್ಲಿ 55 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ನೆರವಾದರು. ಶಿಮ್ರಾನ್ ಹೆಟ್ಮೆಯರ್ 16 ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.

ಹೈದರಾಬಾದ್ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ (0) ಮಯಂಕ್ ಅಗರವಾಲ್ (27), ರಾಹುಲ್ ತ್ರಿಪಾಠಿ (0), ಹ್ಯಾರಿ ಬ್ರೂಕ್ (13), ವಾಷಿಂಗ್ಟನ್ ಸುಂದರ್ (1), ಗ್ಲೆನ್ ಪಿಲಿಪ್ಸ್ (8) ವೈಫಲ್ಯ ಅನುಭವಿಸಿದರು.

ಕೊನೆಯ ಹಂತದಲ್ಲಿ ಅಬ್ದುಲ್ ಸಮದ್ ಔಟಾಗದೆ 32 ರನ್ ಹಾಗೂ ಉಮ್ರಾನ್ ಮಲಿಕ್ ಅಜೇಯ 19 ರನ್ ಗಳಿಸಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

44 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago