ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ ನಡೆದ ಐಪಿಎಲ್ 2023 ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 72 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ಕಳೆದ ಬಾರಿದ ರನ್ನರ್-ಅಪ್ ರಾಜಸ್ಥಾನ ತಂಡವು ಶುಭಾರಂಭ ಮಾಡಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ರಾಜಸ್ಥಾನ ತಂಡವು ಐದು ವಿಕೆಟ್ ನಷ್ಟಕ್ಕೆ 203 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು.
ಬಳಿಕ ಯಜುವೇಂದ್ರ ಚಾಹಲ್ (17ಕ್ಕೆ 4) ಹಾಗೂ ಟ್ರೆಂಟ್ ಬೌಲ್ಟ್ (21ಕ್ಕೆ 2) ದಾಳಿಗೆ ತತ್ತರಿಸಿದ ಹೈದರಾಬಾದ್ ಎಂಟು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ರಾಜಸ್ಥಾನ ಪರ ಆರಂಭಿಕರಾದ ಬಟ್ಲರ್ ಹಾಗೂ ಜೈಸ್ವಾಲ್ ಮೊದಲ ವಿಕೆಟ್ಗೆ 35 ಎಸೆತಗಳಲ್ಲೇ 85 ರನ್ಗಳ ಜೊತೆಯಾಟ ಕಟ್ಟಿದರು. ಕೇವಲ 22 ಎಸೆತಗಳನ್ನು ಎದುರಿಸಿದ ಬಟ್ಲರ್ 54 ರನ್ (7 ಬೌಂಡರಿ, 3 ಸಿಕ್ಸರ್) ಗಳಿಸಿ ಅಬ್ಬರಿಸಿದರು.
ಮತ್ತೊಂದೆಡೆ ಜೈಸ್ವಾಲ್ 37 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು.
ನಾಯಕನ ಆಟವಾಡಿದ ಸಂಜು 32 ಎಸೆತಗಳಲ್ಲಿ 55 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ನೆರವಾದರು. ಶಿಮ್ರಾನ್ ಹೆಟ್ಮೆಯರ್ 16 ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.
ಹೈದರಾಬಾದ್ ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ (0) ಮಯಂಕ್ ಅಗರವಾಲ್ (27), ರಾಹುಲ್ ತ್ರಿಪಾಠಿ (0), ಹ್ಯಾರಿ ಬ್ರೂಕ್ (13), ವಾಷಿಂಗ್ಟನ್ ಸುಂದರ್ (1), ಗ್ಲೆನ್ ಪಿಲಿಪ್ಸ್ (8) ವೈಫಲ್ಯ ಅನುಭವಿಸಿದರು.
ಕೊನೆಯ ಹಂತದಲ್ಲಿ ಅಬ್ದುಲ್ ಸಮದ್ ಔಟಾಗದೆ 32 ರನ್ ಹಾಗೂ ಉಮ್ರಾನ್ ಮಲಿಕ್ ಅಜೇಯ 19 ರನ್ ಗಳಿಸಿದರು.
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…
ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…