ಕ್ರೀಡೆ

IPL 2023: ಬಟ್ಲರ್, ಯಶಸ್ವಿ, ಸಂಜು ಮಿಂಚು: ರಾಜಸ್ಥಾನ ಶುಭಾರಂಭ

ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ ನಡೆದ ಐಪಿಎಲ್ 2023 ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 72 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಕಳೆದ ಬಾರಿದ ರನ್ನರ್-ಅಪ್ ರಾಜಸ್ಥಾನ ತಂಡವು ಶುಭಾರಂಭ ಮಾಡಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ ತಂಡವು ಐದು ವಿಕೆಟ್ ನಷ್ಟಕ್ಕೆ 203 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.

ಬಳಿಕ ಯಜುವೇಂದ್ರ ಚಾಹಲ್ (17ಕ್ಕೆ 4) ಹಾಗೂ ಟ್ರೆಂಟ್ ಬೌಲ್ಟ್ (21ಕ್ಕೆ 2) ದಾಳಿಗೆ ತತ್ತರಿಸಿದ ಹೈದರಾಬಾದ್ ಎಂಟು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ರಾಜಸ್ಥಾನ ಪರ ಆರಂಭಿಕರಾದ ಬಟ್ಲರ್ ಹಾಗೂ ಜೈಸ್ವಾಲ್ ಮೊದಲ ವಿಕೆಟ್‌ಗೆ 35 ಎಸೆತಗಳಲ್ಲೇ 85 ರನ್‌ಗಳ ಜೊತೆಯಾಟ ಕಟ್ಟಿದರು. ಕೇವಲ 22 ಎಸೆತಗಳನ್ನು ಎದುರಿಸಿದ ಬಟ್ಲರ್ 54 ರನ್ (7 ಬೌಂಡರಿ, 3 ಸಿಕ್ಸರ್) ಗಳಿಸಿ ಅಬ್ಬರಿಸಿದರು.

ಮತ್ತೊಂದೆಡೆ ಜೈಸ್ವಾಲ್ 37 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು.

ನಾಯಕನ ಆಟವಾಡಿದ ಸಂಜು 32 ಎಸೆತಗಳಲ್ಲಿ 55 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ನೆರವಾದರು. ಶಿಮ್ರಾನ್ ಹೆಟ್ಮೆಯರ್ 16 ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.

ಹೈದರಾಬಾದ್ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ (0) ಮಯಂಕ್ ಅಗರವಾಲ್ (27), ರಾಹುಲ್ ತ್ರಿಪಾಠಿ (0), ಹ್ಯಾರಿ ಬ್ರೂಕ್ (13), ವಾಷಿಂಗ್ಟನ್ ಸುಂದರ್ (1), ಗ್ಲೆನ್ ಪಿಲಿಪ್ಸ್ (8) ವೈಫಲ್ಯ ಅನುಭವಿಸಿದರು.

ಕೊನೆಯ ಹಂತದಲ್ಲಿ ಅಬ್ದುಲ್ ಸಮದ್ ಔಟಾಗದೆ 32 ರನ್ ಹಾಗೂ ಉಮ್ರಾನ್ ಮಲಿಕ್ ಅಜೇಯ 19 ರನ್ ಗಳಿಸಿದರು.

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago