ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.
ಆದರೆ, ಲಖನೌ ತಂಡದ ಆಯುಷ್ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್ಗೆ ಬಂದ ಯುವ ಬ್ಯಾಟರ್ ಆಯುಷ್ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.
ತಂಡವು 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಸಂಕ್ಷಿಪ್ತ ಸ್ಕೋರ್:
ಲಖನ್ ಸೂಪರ್ ಜೈಂಟ್ಸ್: 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)
ಮಳೆಯಿಂದಾಗಿ ಪಂದ್ಯ ಸ್ಥಗಿತ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…