ಕ್ರೀಡೆ

ಐಪಿಎಲ್‌ 2023: ಚೆನ್ನೈ-ಲಖನೌ ಪಂದ್ಯಕ್ಕೆ ಮಳೆ ಅಡ್ಡಿ

ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.

ಆದರೆ, ಲಖನೌ ತಂಡದ ಆಯುಷ್‌ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್‌ಗೆ ಬಂದ ಯುವ ಬ್ಯಾಟರ್ ಆಯುಷ್‌ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.

ತಂಡವು 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಸಂಕ್ಷಿಪ್ತ ಸ್ಕೋ‌ರ್‌:

ಲಖನ್ ಸೂಪರ್ ಜೈಂಟ್ಸ್: 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್‌ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)

ಮಳೆಯಿಂದಾಗಿ ಪಂದ್ಯ ಸ್ಥಗಿತ.

andolanait

Recent Posts

ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.…

19 seconds ago

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

8 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

12 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago