ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.
ಆದರೆ, ಲಖನೌ ತಂಡದ ಆಯುಷ್ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್ಗೆ ಬಂದ ಯುವ ಬ್ಯಾಟರ್ ಆಯುಷ್ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.
ತಂಡವು 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಸಂಕ್ಷಿಪ್ತ ಸ್ಕೋರ್:
ಲಖನ್ ಸೂಪರ್ ಜೈಂಟ್ಸ್: 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)
ಮಳೆಯಿಂದಾಗಿ ಪಂದ್ಯ ಸ್ಥಗಿತ.
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…