ಕ್ರೀಡೆ

ಐಪಿಎಲ್‌ 2023: ಚೆನ್ನೈ-ಲಖನೌ ಪಂದ್ಯಕ್ಕೆ ಮಳೆ ಅಡ್ಡಿ

ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.

ಆದರೆ, ಲಖನೌ ತಂಡದ ಆಯುಷ್‌ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್‌ಗೆ ಬಂದ ಯುವ ಬ್ಯಾಟರ್ ಆಯುಷ್‌ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.

ತಂಡವು 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಸಂಕ್ಷಿಪ್ತ ಸ್ಕೋ‌ರ್‌:

ಲಖನ್ ಸೂಪರ್ ಜೈಂಟ್ಸ್: 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್‌ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)

ಮಳೆಯಿಂದಾಗಿ ಪಂದ್ಯ ಸ್ಥಗಿತ.

andolanait

Recent Posts

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

5 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

11 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

12 hours ago