ಕ್ರೀಡೆ

ಐಪಿಎಲ್‌ 2023: ಚೆನ್ನೈ-ಲಖನೌ ಪಂದ್ಯಕ್ಕೆ ಮಳೆ ಅಡ್ಡಿ

ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.

ಆದರೆ, ಲಖನೌ ತಂಡದ ಆಯುಷ್‌ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್‌ಗೆ ಬಂದ ಯುವ ಬ್ಯಾಟರ್ ಆಯುಷ್‌ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.

ತಂಡವು 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಸಂಕ್ಷಿಪ್ತ ಸ್ಕೋ‌ರ್‌:

ಲಖನ್ ಸೂಪರ್ ಜೈಂಟ್ಸ್: 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್‌ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)

ಮಳೆಯಿಂದಾಗಿ ಪಂದ್ಯ ಸ್ಥಗಿತ.

andolanait

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

15 mins ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

18 mins ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

23 mins ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

30 mins ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

3 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

3 hours ago