ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.
ಆದರೆ, ಲಖನೌ ತಂಡದ ಆಯುಷ್ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್ಗೆ ಬಂದ ಯುವ ಬ್ಯಾಟರ್ ಆಯುಷ್ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.
ತಂಡವು 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಸಂಕ್ಷಿಪ್ತ ಸ್ಕೋರ್:
ಲಖನ್ ಸೂಪರ್ ಜೈಂಟ್ಸ್: 19.2 ಓವರ್ಗಳಲ್ಲಿ 7 ವಿಕೆಟ್ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)
ಮಳೆಯಿಂದಾಗಿ ಪಂದ್ಯ ಸ್ಥಗಿತ.
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…