ಕ್ರೀಡೆ

IPL 2023: ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮಕ್ಕೆ ಗಾವಸ್ಕರ್, ಹರ್ಭಜನ್ ಮೆಚ್ಚುಗೆ

ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮವು ಎಲ್ಲರ ಗಮನ ಸೆಳೆದಿದೆ.

ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ ಮಾಡಲಿವೆ ಎಂಬ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಈ ನಿಯಮದ ಬಗ್ಗೆ ಮಾಜಿ ಕ್ರಿಕೆಟಿಗರಾದ ಸುನಿಲ್‌ ಗಾವಸ್ಕರ್‌ ಮತ್ತು ಹರ್ಭಜನ್‌ ಸಿಂಗ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮದ ಪ್ರಕಾರ ತಂಡಗಳು ಅಂತಿಮ ಇಲೆವೆನ್‌ ಜತೆಗೆ, ಐವರು ಬದಲಿ ಆಟಗಾರರನ್ನು ಕೂಡಾ ಹೆಸರಿಸಬೇಕು. ಅದರಲ್ಲಿ ಒಬ್ಬ ಆಟಗಾರ (ಇಂಪ್ಯಾಕ್ಟ್ ಪ್ಲೇಯರ್‌) ಪಂದ್ಯದ ಯಾವುದೇ ಹಂತದಲ್ಲಿ ಆರಂಭಿಕ ಇಲೆವೆನ್‌ನ ಆಟಗಾರರನ್ನು ಬದಲಾಯಿಸಿ ಕಣಕ್ಕಿಳಿಯಬಹುದು. ಇನಿಂಗ್ಸ್‌ನ 14ನೇ ಓವರ್‌ನ ಮುಕ್ತಾಯಕ್ಕೆ ಮುನ್ನ ಈ ಬದಲಾವಣೆ ಮಾಡಬೇಕು.

ಬ್ಯಾಟ್‌ ಮಾಡುವ ತಂಡವು ಔಟಾದ ಅಥವಾ ನಿವೃತ್ತಿಗೊಂಡು ಪೆವಿಲಿಯನ್‌ ಮರಳಿದ ಬ್ಯಾಟರ್‌ಗೆ ಬದಲಿಯಾಗಿ ಇಂಪ್ಯಾಕ್ಟ್‌ ಪ್ಲೇಯರ್‌ಅನ್ನು ಕಣಕ್ಕಿಳಿಸಿದರೂ 11 ಆಟಗಾರರಿಗಷ್ಟೇ ಬ್ಯಾಟ್‌ ಮಾಡಲು ಅವಕಾಶವಿದೆ.

ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ಈ ನಿಯಮವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು.

ಈ ನಿಯಮವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ತಂಡಗಳಿಗೆ ಕೆಲ ಸಮಯ ಬೇಕಾಗಲಿದೆ ಎಂದು ಗಾವಸ್ಕರ್‌ ಹೇಳಿದ್ದಾರೆ.

ಸ್ಟಾರ್‌ಸ್ಪೋರ್ಟ್ಸ್‌ ಜೊತೆ ಮಾತನಾಡಿರುವ ಗಾವಸ್ಕರ್‌, ‘ಹೊಸ ನಿಯಮವನ್ನು ಅರ್ಥಮಾಡಿಕೊಳ್ಳಲು ಮತ್ತು ಹೊಸ ಪರಿಸ್ಥಿತಿಗೆ ಒಗ್ಗಿಕೊಳ್ಳಲು ಸಮಯ ಬೇಕಾಗುತ್ತದೆ. ಟಾಟಾ ಐಪಿಎಲ್‌–2023ರಲ್ಲಿ ಆಡುವ ಎಲ್ಲ ತಂಡಗಳಿಗೂ ಇದು ಅನ್ವಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹರ್ಭಜನ್‌ ಅವರು, ‘ಇದೊಂದು ವಿನೂತನ ನಡೆ. ಆಟದ ಪರಿಸ್ಥಿತಿಯಲ್ಲಿ ತಂಡಕ್ಕೆ ಸೂಕ್ತವಲ್ಲ ಎನಿಸುವ ಅಥವಾ ಅಗತ್ಯ ಎನಿಸುವ ಯಾವುದೇ ಆಟಗಾರನನ್ನು ಆಡುವ ಹನ್ನೊಂದರ ಬಳಕ್ಕೆ ಸೇರಿಸಿಕೊಳ್ಳಲು ಇದರಿಂದ ಸಾಧ್ಯವಿದೆ. ಇದೊಂದು ಅತ್ಯುತ್ತಮ ನಿಯಮ. ಬಿಸಿಸಿಐಗೆ ಅಭಿನಂದನೆಗಳು’ ಎಂದಿದ್ದಾರೆ.

ಮೊದಲ ಪಂದ್ಯದಲ್ಲಿ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ
16ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಶುಕ್ರವಾರ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಎದುರು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಉಭಯ ತಂಡಗಳು ತಲಾ ಒಬ್ಬರು ‘ಇಂಪ್ಯಾಕ್ಟ್‌ ಪ್ಲೇಯರ್‌’ಗಳನ್ನು ಕಣಕ್ಕಿಳಿಸಿದವು.

ಗುಜರಾತ್‌ ಪಡೆ, ಫೀಲ್ಡಿಂಗ್‌ ವೇಳೆ ಗಾಯಗೊಂಡ ಕೇನ್‌ ವಿಲಿಯಮ್ಸನ್‌ ಬದಲು ಸಾಯ್‌ ಸುದರ್ಶನ್‌ ಅವರನ್ನು ಹಾಗೂ ಚೆನ್ನೈ ತಂಡ ಅಂಬಟಿ ರಾಯುಡು ಬದಲು ಬೌಲರ್‌ ತುಷಾರ್‌ ದೇಶಪಾಂಡೆ ಅವರನ್ನು ಆಡಿಸಿದವು.

andolanait

Recent Posts

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

10 mins ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

17 mins ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

23 mins ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

25 mins ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

27 mins ago

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

29 mins ago