ಲಖನೌ: ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಲಖನೌ ತಂಡಕ್ಕೆ ಇದು ಮೂರನೇ ಪಂದ್ಯ. ಆಡಿರುವ ಎರಡರಲ್ಲಿ ಒಂದು ಗೆದ್ದು ಇನ್ನೊಂದರಲ್ಲಿ ಸೋತಿದೆ. ಆದರೆ, ಸನ್ರೈಸರ್ಸ್ ತಂಡವು ಆಡಿರುವ ಒಂದು ಪಂದ್ಯದಲ್ಲಿ ಪರಾಭವಗೊಂಡಿದೆ. ಆ ಪಂದ್ಯಕ್ಕೆ ಅಲಭ್ಯರಾಗಿದ್ದ ದಕ್ಷಿಣ ಆಫ್ರಿಕಾದ ಏಡನ್ ಮರ್ಕರಂ, ಮಾರ್ಕೊ ಜೆನ್ಸನ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರು ಇಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಸನ್ರೈಸರ್ಸ್ ತಂಡದಲ್ಲಿ ಉತ್ಸಾಹ ಗರಿಗೆದರಿದೆ.
2021ರ ಆವೃತ್ತಿಯಲ್ಲಿ ಹೈದರಾಬಾದ್ ತಂಡವು ಎಂಟನೇ ಸ್ಥಾನ ಪಡೆದಿತ್ತು. ಈ ಬಾರಿ ಬ್ಯಾಟರ್ ಏಡನ್ ಮರ್ಕರಂ ಅವರ ನಾಯಕತ್ವದ ಬಗ್ಗೆ ಹೆಚ್ಚಿನ ನಿರೀಕ್ಷೆಗಳು ಮೂಡಿವೆ.
ಬ್ಯಾಟಿಂಗ್ ವಿಭಾಗದಲ್ಲಿ ಮಯಂಕ್ ಅಗರವಾಲ್ ಉತ್ತಮ ಲಯದಲ್ಲಿದ್ದಾರೆ. ಆದರೆ ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್ ಮತ್ತು ಗ್ಲೆನ್ ಫಿಲಿಪ್ ಪ್ರಮುಖ ಶಕ್ತಿಯಾಗಿದ್ದಾರೆ. ಆಲ್ರೌಂಡರ್ ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್ ಅವರು ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಬಲ್ಲರು.
ಲಖನೌ ತಂಡದಲ್ಲಿ ಅನುಭವಿ ಬ್ಯಾಟರ್ಗಳ ದಂಡು ಇದೆ. ರಾಹುಲ್ ಮತ್ತು ಕೈಲ್ ಮೇಯರ್ಸ್ ಉತ್ತಮ ಆರಂಭ ನೀಡಿದರೆ, ದೀಪಕ್ ಹೂಡಾ, ಆಯುಷ್ ಬಡೋಣಿ, ಮಾರ್ಕಸ್ ಸ್ಟೊಯಿನಿಸ್ ಹಾಗೂ ನಿಕೊಲಸ್ ಪೂರನ್ ಅಂತಿಮ ಹಂತದ ಓವರ್ಗಳಲ್ಲಿ ರನ್ಗಳನ್ನು ಸೂರೆ ಮಾಡಬಲ್ಲರು. ಇದರಿಂದಾಗಿ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗುವುದು.
ಇಲ್ಲಿಯ ಏಕನಾ ಕ್ರೀಡಾಂಗಣವು ಬ್ಯಾಟಿಂಗ್ಗೆ ಉತ್ತಮವಾದ ಪಿಚ್. ಇದರಲ್ಲಿ ರನ್ಗಳ ಹೊಳೆ ಹರಿಯುವ ಸಾಧ್ಯತೆ ಇದೆ.
ತಂಡಗಳು
ಸನ್ರೈಸರ್ಸ್ ಹೈದರಾಬಾದ್: ಏಡನ್ ಮರ್ಕರಂ (ನಾಯಕ), ಭುವನೇಶ್ವರ್ ಕುಮಾರ್, ಮಯಂಕ್ ಅಗರವಾಲ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್ಸ್, ಮಯಂಕ್ ಡಾಗರ್, ಫಜಲ್ಹಕ್ ಫಾರೂಕಿ, ಅಕೀಲ್ ಹುಸೇನ್, ಕಾರ್ತಿಕ್ ತ್ಯಾಗಿ, ಹೆನ್ರಿಚ್ ಕ್ಲಾಸನ್, ಟಿ. ನಟರಾಜನ್, ನಿತೀಶ್ ಕುಮಾರ್ ರೆಡ್ಡಿ, ಗ್ಲೆನ್ ಫಿಲಿಪ್ಸ್, ಆದಿಲ್ ರಶೀದ್, ಸನ್ವೀರ್ ಸಿಂಗ್, ರಾಹುಲ್ ತ್ರಿಪಾಠಿ, ಉಮ್ರಾನ್ ಮಲಿಕ್, ವಿವ್ರಾಂತ್ ಶರ್ಮಾ, ಸಮರ್ಥ್ ವ್ಯಾಸ್, ವಾಷಿಂಗ್ಟನ್ ಸುಂದರ್, ಉಪೇಂದ್ರ ಯಾದವ್.
ಲಖನೌ ಸೂಪರ್ಜೈಂಟ್ಸ್: ಕೆ.ಎಲ್. ರಾಹುಲ್ (ನಾಯಕ/ವಿಕೆಟ್ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃಣಾಲ್ ಪಾಂಡ್ಯ, ಅಮಿತ್ ಮಿಶ್ರಾ, ನಿಕೊಲಸ್ ಪೂರನ್ (ವಿಕೆಟ್ಕೀಪರ್), ಆಯುಷ್ ಬಡೋನಿ, ಆವೇಶ್ ಖಾನ್, ಕರಣ್ ಶರ್ಮಾ, ಯುಧವಿರ್ ಚರಕ್, ಯಶ್ ಠಾಕೂರ್, ರೊಮೆರಿಯೊ ಶೆಫರ್ಡ್, ಮಾರ್ಕ್ ವುಡ್, ಸ್ವಪ್ನಿಲ್ ಸಿಂಗ್, ಮನನ್ ವೊಹ್ರಾ, ಡೇನಿಯಲ್ ಸ್ಯಾಮ್ಸ್, ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್, ಜಯದೇವ್ ಉನದ್ಕತ್, ಮಾರ್ಕಸ್ ಸ್ಟೊಯಿನಿಸ್, ರವಿ ಬಿಷ್ಣೋಯಿ, ಮಯಂಕ್ ಯಾದವ್.
ಪಂದ್ಯ ಆರಂಭ: ರಾತ್ರಿ 7.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೊ ಸಿನೆಮಾ ಆ್ಯಪ್.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…