ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಆರ್ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.
ಪಂಜಾಬ್ ಪರ ಹರ್ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…