ಕ್ರೀಡೆ

IPL 2023: ನಿವೃತ್ತಿಯ ಸುಳಿವು ನೀಡಿದ ಮಹೇಂದ್ರ ಸಿಂಗ್ ಧೋನಿ

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ 135 ರನ್ ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈ ತಂಡವು 18.4 ಓವರ್ ಗಳಲ್ಲಿ ಗೆಲುವು ಕಂಡಿತು.

ಪಂದ್ಯದ ಬಳಿಕ ಸಿಎಸ್ ಕೆ ನಾಯಕ ಎಂ.ಎಸ್. ಧೋನಿ ನಿವೃತ್ತಿ ಸುಳಿವು ನೀಡಿದ್ದಾರೆ.

“ನನ್ನ ವೃತ್ತಿಜೀವನದ ಕೊನೆಯ ಹಂತದಲ್ಲಿದ್ದೇನೆ. ಆದರೆ ಹೆಚ್ಚು ಸಮಯ ನಾನು ಆಡಿದಂತೆ ಅದನ್ನು ಆನಂದಿಸುವುದು ಮುಖ್ಯ” ಎಂದಿದ್ದಾರೆ.

“ಎರಡು ವರ್ಷದ ನಂತರದ ಇಲ್ಲಿ ಅಭಿಮಾನಿಗಳು ಬಂದು ಪಂದ್ಯ ನೋಡುತ್ತಿದ್ದಾರೆ. ಕ್ರೀಡಾಂಗಣ ತುಂಬಿದೆ. ಇಲ್ಲಿ ಆಡಲು ಖುಷಿಯಾಗುತ್ತದೆ. ನಾವು ಚೆನ್ನೈನಲ್ಲಿ ಹೆಚ್ಚು ಪಂದ್ಯಗಳನ್ನಾಡಿಲ್ಲ. ಈ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಅವರು ಯಾವತ್ತೂ ನನ್ನ ಮಾತುಗಳನ್ನು ಕೇಳಲು ಇರುತ್ತಾರೆ. ( ಪ್ರೆಸೆಂಟೇಶನ್ ಮಾತುಗಳು) ಹೆಚ್ಚು ಬ್ಯಾಟಿಂಗ್ ಮಾಡಲು ಅವಕಾಶ ಸಿಗುತ್ತಿಲ್ಲ, ಪರವಾಗಿಲ್ಲ, ಹುಡುಗರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ” ಎಂದು ಧೋನಿ ಹೇಳಿದರು.

41 ವರ್ಷದ ಧೋನಿ 2020ರ ಆಗಸ್ಟ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಆದರೆ ಬಳಿಕವೂ ಐಪಿಎಲ್ ಆಡುತ್ತಿದ್ದಾರೆ. 2022ರ ಸೀಸನ್ ನ ಆರಂಭದಲ್ಲಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ನೀಡಲಾಗಿತ್ತು. ಆದರೆ ಅವರು ವಿಫಲರಾದ ಹಿನ್ನೆಲೆಯಲ್ಲಿ ಧೋನಿ ಮತ್ತೆ ನಾಯಕತ್ವ ನಿಭಾಯಿಸುತ್ತಿದ್ದಾರೆ.

andolanait

Recent Posts

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

4 mins ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

17 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

28 mins ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

40 mins ago

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ಹೊಸದಿಲ್ಲಿ : ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್‌ನ ಸಂಪೂರ್ಣ ಹಣ ಖೋತಾ…

1 hour ago

ನಾನು ಸಾಲದ ರಾಮಯ್ಯ ಎಲ್ಲ, ಅನ್ನದ ರಾಮಯ್ಯ : ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ…

2 hours ago