ಕ್ರೀಡೆ

IPL 2023: ನಿವೃತ್ತಿಯ ಸುಳಿವು ನೀಡಿದ ಮಹೇಂದ್ರ ಸಿಂಗ್ ಧೋನಿ

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ 135 ರನ್ ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈ ತಂಡವು 18.4 ಓವರ್ ಗಳಲ್ಲಿ ಗೆಲುವು ಕಂಡಿತು.

ಪಂದ್ಯದ ಬಳಿಕ ಸಿಎಸ್ ಕೆ ನಾಯಕ ಎಂ.ಎಸ್. ಧೋನಿ ನಿವೃತ್ತಿ ಸುಳಿವು ನೀಡಿದ್ದಾರೆ.

“ನನ್ನ ವೃತ್ತಿಜೀವನದ ಕೊನೆಯ ಹಂತದಲ್ಲಿದ್ದೇನೆ. ಆದರೆ ಹೆಚ್ಚು ಸಮಯ ನಾನು ಆಡಿದಂತೆ ಅದನ್ನು ಆನಂದಿಸುವುದು ಮುಖ್ಯ” ಎಂದಿದ್ದಾರೆ.

“ಎರಡು ವರ್ಷದ ನಂತರದ ಇಲ್ಲಿ ಅಭಿಮಾನಿಗಳು ಬಂದು ಪಂದ್ಯ ನೋಡುತ್ತಿದ್ದಾರೆ. ಕ್ರೀಡಾಂಗಣ ತುಂಬಿದೆ. ಇಲ್ಲಿ ಆಡಲು ಖುಷಿಯಾಗುತ್ತದೆ. ನಾವು ಚೆನ್ನೈನಲ್ಲಿ ಹೆಚ್ಚು ಪಂದ್ಯಗಳನ್ನಾಡಿಲ್ಲ. ಈ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಅವರು ಯಾವತ್ತೂ ನನ್ನ ಮಾತುಗಳನ್ನು ಕೇಳಲು ಇರುತ್ತಾರೆ. ( ಪ್ರೆಸೆಂಟೇಶನ್ ಮಾತುಗಳು) ಹೆಚ್ಚು ಬ್ಯಾಟಿಂಗ್ ಮಾಡಲು ಅವಕಾಶ ಸಿಗುತ್ತಿಲ್ಲ, ಪರವಾಗಿಲ್ಲ, ಹುಡುಗರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ” ಎಂದು ಧೋನಿ ಹೇಳಿದರು.

41 ವರ್ಷದ ಧೋನಿ 2020ರ ಆಗಸ್ಟ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಆದರೆ ಬಳಿಕವೂ ಐಪಿಎಲ್ ಆಡುತ್ತಿದ್ದಾರೆ. 2022ರ ಸೀಸನ್ ನ ಆರಂಭದಲ್ಲಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ನೀಡಲಾಗಿತ್ತು. ಆದರೆ ಅವರು ವಿಫಲರಾದ ಹಿನ್ನೆಲೆಯಲ್ಲಿ ಧೋನಿ ಮತ್ತೆ ನಾಯಕತ್ವ ನಿಭಾಯಿಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago