ಕ್ರೀಡೆ

IPL 2023 | ಮನೀಷ್ ಅರ್ಧಶತಕ ವ್ಯರ್ಥ, ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 23 ರನ್‌ ಅಂತರದಿಂದ ಗೆಲುವು ಸಾಧಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ.

175 ರನ್‌ ಗುರಿ ಬೆನ್ನತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 151 ರನ್ ಗಳಿಸಿತು. ಇದರೊಂದಿಗೆ 23 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು. ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದ ಡೇವಿಡ್ ವಾರ್ನರ್ ಪಡೆಗೆ ಮತ್ತೆ ನಿರಾಸೆಯಾಗಿದೆ.

ಡೆಲ್ಲಿ ಪರ ಪೃಥ್ವಿ ಶಾ 00, ಮಿಚೆಲ್ ಮಾರ್ಚ್ 00, ಯಶ್‌ ದೌಲ್ 01, ಅಭಿಷೇಕ್ ಪೋವೆಲ್ 05, ಲಲಿತ್ ಯಾದವ್ ಕೇವಲ 4 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಇತ್ತ ಕನ್ನಡಿಗ ಮನೀಷ್ ಪಾಂಡೆ 38 ಎಸೆತಗಳಲ್ಲಿ 1 ಸಿಕ್ಸರ್, 5 ಬೌಂಡರಿ ಸಮೇತ 50 ರನ್ ಗಳಿಸಿದರು. ನಾಯಕ ಡೇವಿಡ್ ವಾರ್ನರ್ 19 ರನ್ ಗಳಿಸಿದರು.

ಆರ್‌ಸಿಬಿ ಪರ ವಿಜಯಕುಮಾರ್ ವೈಶಾಕ್ 3, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರೆ, ಪಾರ್ನೆಲ್, ಹರ್ಷಲ್ ಪಟೇಲ್, ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ.

ಆರ್‌ಸಿಬಿ ಪರ ಆರಂಭಿಕ ಆಟಗಾರರಾದ ವಿರಾಟ್‌ ಕೊಹ್ಲಿ ಅರ್ಧಶತಕ (50) ಸಿಡಿಸಿ ಸಂಭ್ರಮಿಸಿದರು. ಉಳಿದಂತೆ ಮಹಿಪಾಲ್ ಲೊಮ್ರೋಡ್ 26, ಮ್ಯಾಕ್ಸ್‌ವೆಲ್ 24, ಫಫ್‌ ಡುಪ್ಲೆಸಿ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಡೆಲ್ಲಿ ಪರ ಕುಲದೀಪ್ ಯಾದವ್, ಮಿಚೆಲ್ ಮಾರ್ಶ್ 2 ವಿಕೆಟ್ ಪಡೆದರೆ, ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಪಂದ್ಯಶ್ರೇಷ್ಠ: ವಿರಾಟ್‌ ಕೊಹ್ಲಿ

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago