ಕ್ರೀಡೆ

IPL 2023: ಮೊಹಮ್ಮದ್ ಸಿರಾಜ್ ದಾಳಿಗೆ ಪಂಜಾಬ್ ತತ್ತರ, ಆರ್‌ಸಿಬಿಗೆ ಭರ್ಜರಿ ಜಯ

‌ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 24 ರನ್‌ ಅಂತರದಿಂದ ಗೆಲುವು ಸಾಧಿಸಿತು.

ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.

175 ರನ್‌ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್ ಗಳಿಸಿ ಆಲೌಟ್‌ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್‌ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.

ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಪಂದ್ಯಶ್ರೇಷ್ಠ: ಮೊಹಮದ್‌ ಸಿರಾಜ್‌

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago