ಕ್ರೀಡೆ

IPL 2023: ಮೊಹಮ್ಮದ್ ಸಿರಾಜ್ ದಾಳಿಗೆ ಪಂಜಾಬ್ ತತ್ತರ, ಆರ್‌ಸಿಬಿಗೆ ಭರ್ಜರಿ ಜಯ

‌ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 24 ರನ್‌ ಅಂತರದಿಂದ ಗೆಲುವು ಸಾಧಿಸಿತು.

ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.

175 ರನ್‌ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್ ಗಳಿಸಿ ಆಲೌಟ್‌ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್‌ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.

ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಪಂದ್ಯಶ್ರೇಷ್ಠ: ಮೊಹಮದ್‌ ಸಿರಾಜ್‌

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

48 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago