ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಅಂತರದಿಂದ ಗೆಲುವು ಸಾಧಿಸಿತು.
ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.
175 ರನ್ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್ಗಳಲ್ಲಿ 150 ರನ್ ಗಳಿಸಿ ಆಲೌಟ್ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಆರ್ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಆರ್ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.
ಪಂಜಾಬ್ ಪರ ಹರ್ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಪಂದ್ಯಶ್ರೇಷ್ಠ: ಮೊಹಮದ್ ಸಿರಾಜ್
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…