ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಅಂತರದಿಂದ ಗೆಲುವು ಸಾಧಿಸಿತು.
ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.
175 ರನ್ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್ಗಳಲ್ಲಿ 150 ರನ್ ಗಳಿಸಿ ಆಲೌಟ್ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಆರ್ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಆರ್ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.
ಪಂಜಾಬ್ ಪರ ಹರ್ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಪಂದ್ಯಶ್ರೇಷ್ಠ: ಮೊಹಮದ್ ಸಿರಾಜ್
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…