ಕ್ರೀಡೆ

IPL 2023: ಮೊಹಮ್ಮದ್ ಸಿರಾಜ್ ದಾಳಿಗೆ ಪಂಜಾಬ್ ತತ್ತರ, ಆರ್‌ಸಿಬಿಗೆ ಭರ್ಜರಿ ಜಯ

‌ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 24 ರನ್‌ ಅಂತರದಿಂದ ಗೆಲುವು ಸಾಧಿಸಿತು.

ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.

175 ರನ್‌ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್ ಗಳಿಸಿ ಆಲೌಟ್‌ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್‌ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.

ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಪಂದ್ಯಶ್ರೇಷ್ಠ: ಮೊಹಮದ್‌ ಸಿರಾಜ್‌

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago