ಕ್ರೀಡೆ

IPL 2023: ಮುಂಬೈ ಮೊದಲ ಎದುರಾಳಿ, ಆರ್‌ಸಿಬಿ ವೇಳಾಪಟ್ಟಿ

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2023) ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಯೋಜನೆಯೊಂದಿಗೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಹದಿನಾರನೇ ಆವೃತ್ತಿಯ ಟೂರ್ನಿಯಲ್ಲಿ ಕಣಕ್ಕೆ ಇಳಿಯಲಿದೆ. ಮಾರ್ಚ್‌ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಸೆಣಸುವ ಮೂಲಕ 2023ರ ಐಪಿಎಲ್‌ ಟೂರ್ನಿ ಅಧಿಕೃತವಾಗಿ ಆರಂಭವಾಗಲಿದೆ. ಏಪ್ರಿಲ್‌ 2 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರಿಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತನ್ನ ಮೊದಲ ಪಂದ್ಯವಾಡಲಿದೆ

ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದ 14 ಪಂದ್ಯಗಳಿಂದ ಫಾಫ್‌ ಡು ಪ್ಲೆಸಿಸ್‌ ನಾಯಕತ್ವದ ಆರ್‌ಸಿಬಿ, 8ರಲ್ಲಿ ಗೆದ್ದು ಇನ್ನುಳಿದ 6 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ಪ್ಲೇಆಫ್ಸ್‌ಗೆ ತಲುಪಿದ್ದ ಬೆಂಗಳೂರು ತಂಡ, ಎಲಿಮಿನೇಟರ್‌ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ 14 ರನ್‌ಗಳಿಂದ ಗೆಲುವು ಪಡೆದಿತ್ತು. ಆದರೆ, ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 7 ವಿಕೆಟ್‌ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಆರ್‌ಸಿಬಿ ತಂಡದ ಪರ ಕಳೆದ ಆವೃತ್ತಿಯಲ್ಲಿ ಫಾಫ್‌ ಡು ಪ್ಲೆಸಿಸ್‌ 16 ಪಂದ್ಯಗಳಿಂದ 468 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಅವರು ಮೂರು ಅರ್ಧಶತಕಗಳನ್ನು ಸಿಡಿಸಿದ್ದರು. ಮತ್ತೊಂದೆಡೆ ವಾನಿಂದು ಹಸರಂಗ ಐದು ವಿಕೆಟ್‌ ಸಾಧನೆ ಸೇರಿದಂತೆ ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ 2022ರ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಎರಡನೇ ಬೌಲರ್‌ ಎನಿಸಿಕೊಂಡಿದ್ದರು.

ಹಳೆಯ ಸಾಂಪ್ರದಾಯದಂತೆ ಈ ಬಾರಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ 2023ರ ಐಪಿಎಲ್‌ ಟೂರ್ನಿಯು ಸಾಕಷ್ಟು ಕುತೂಹಲ ಕೆರಳಿಸಲಿದೆ. ಮತ್ತೊಂದೆಡೆ ವಿರಾಟ್‌ ಕೊಹ್ಲಿ ಮೂರೂ ಸ್ವರೂಪದಲ್ಲಿ ಶತಕಗಳನ್ನು ಸಿಡಿಸುವ ಮೂಲಕ ಭರ್ಜರಿ ಫಾರ್ಮ್‌ಗೆ ಮರಳಿದ್ದು, ಇದು ಆರ್‌ಸಿಬಿ ಪಾಲಿಗೆ ಪ್ಲಸ್‌ ಪಾಯಿಂಟ್‌ ಆಗಲಿದೆ.

ಆರ್‌ಸಿಬಿ ತಂಡ ಸಂಪೂರ್ಣ ವೇಳಾಪಟ್ಟಿ

ಪಂದ್ಯ 1: ಏಪ್ರಿಲ್ 2, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ಬೆಂಗಳೂರು (7:30PM IST)

ಪಂದ್ಯ 2: ಏಪ್ರಿಲ್ 6, 2023 – ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ (ಸಂಜೆ 7:30 IST)

ಪಂದ್ಯ 3: ಏಪ್ರಿಲ್ 10, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಖನೌ ಸೂಪರ್ ಜಯಂಟ್ಸ್‌, ಬೆಂಗಳೂರು (3:30PM IST)

ಪಂದ್ಯ 4: ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್, ಬೆಂಗಳೂರು (3:30PM IST)

ಪಂದ್ಯ 5: ಏಪ್ರಿಲ್ 17, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30 IST)

ಪಂದ್ಯ 6: ಏಪ್ರಿಲ್ 20, 2023 – ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ (3:30PM IST)

ಪಂದ್ಯ 7: ಏಪ್ರಿಲ್ 23, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್‌ ರಾಯಲ್ಸ್, ಬೆಂಗಳೂರು (3:30PM IST)

ಪಂದ್ಯ 8: ಏಪ್ರಿಲ್ 26, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (7:30 PM IST)

ಪಂದ್ಯ 9: ಮೇ 1, 2023 – ಲಖನೌ ಸೂಪರ್ ಜಯಂಟ್ಸ್‌ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಖನೌ (7:30PM IST)

ಪಂದ್ಯ 10: ಮೇ 6, 2023 – ದಿಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದಿಲ್ಲಿ (7:30PM IST)

ಪಂದ್ಯ 11: ಮೇ 9, 2023 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ (7:30PM IST)

ಪಂದ್ಯ 12: ಮೇ 14, 2023 – ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (ಮಧ್ಯಾಹ್ನ 3:30 IST)

ಪಂದ್ಯ 13: ಮೇ 18, 2023 – ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ (ಸಂಜೆ 7:30 IST)

ಪಂದ್ಯ 14: ಮೇ 21, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್, ಬೆಂಗಳೂರು (ಸಂಜೆ 7:30 IST)

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ವಾನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಝ್‌ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗಿ, ಆಕಾಶ್ ದೀಪ್‌, ಜೋ ಹೇಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರಣ್‌ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ.

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

8 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

32 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

51 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

1 hour ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago