ಕ್ರೀಡೆ

IPL 2023| ‘ಆರ್‌ಸಿಬಿ ನಂಗೆ ಚಾನ್ಸ್ ಕೊಡಲಿಲ್ಲ, ಮುಂಬೈ ಇಂಡಿಯನ್ಸ್ ಕೊಟ್ಟಿದೆ’: ಆಕಾಶ್‌ ಮಧ್ವಾಲ್‌

ಅಹಮದಾಬಾದ್‌: ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 2023ರ ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್‌) ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್ ಸಾಧನೆ ಮಾಡುವ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡ ಆಕಾಶ್‌ ಮಧ್ವಾಲ್‌ ಹಲವು ಮಹತ್ತರವಾದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಬುಧವಾರ ಚೆನ್ನೈನಲ್ಲಿ ನಡೆದಿದ್ದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 183 ರನ್‌ ಗುರಿ ಹಿಂಬಾಲಿಸಿದ್ದ ಲಖನೌ ಸೂಪರ್‌ ಜಯಂಟ್ಸ್ ತಂಡವನ್ನು ಆಕಾಶ್‌ ಮಧ್ವಾಲ್‌ ಅವರು ತಮ್ಮ ಮಾರಕ ಬೌಲಿಂಗ್‌ ದಾಳಿಯಿಂದ ಕಟ್ಟಿಹಾಕಿದ್ದರು. ಬೌಲ್ ಮಾಡಿದ ಕೇವಲ 3.3 ಓವರ್‌ಗಳಲ್ಲಿ ಕೇವಲ 5 ರನ್‌ ನೀಡಿ 5 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಕಾಶ್‌ ಮಧ್ವಾಲ್‌ ಅವರು, ತಮ್ಮ ಐಪಿಎಲ್‌ ವೃತ್ತಿ ಜೀವನದ ಪಯಣವನ್ನು ಬಹಿರಂಗಪಡಿಸಿದ್ದಾರೆ. 2019ರಲ್ಲಿ ಆರ್‌ಸಿಬಿಗೆ ನೆಟ್‌ ಬೌಲರ್‌ ಆಗಿದ್ದ ಮಧ್ವಾಲ್‌, 2022ರ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು.

2019ರಲ್ಲಿ ಆರ್‌ಸಿಬಿಗೆ ನೆಟ್‌ ಬೌಲರ್‌ ಆಗಿದ್ದೆ

“2019ರಲ್ಲಿ ಆರ್‌ಸಿಬಿ ತಂಡಕ್ಕೆ ನೆಟ್‌ ಬೌಲರ್‌ ಆಗಿದ್ದೆ. ಈ ವರ್ಷದಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅವಕಾಶ ಪಡೆದುಕೊಳ್ಳುತ್ತಿದ್ದೇನೆ. ಸ್ಕೌಟಿಂಗ್‌ ತಂಡ ನನ್ನನ್ನು ಮೊದಲಿಗೆ ನೆಟ್‌ ಬೌಲರ್‌ ಆಗಿ ಮುಂಬೈ ಇಂಡಿಯನ್ಸ್‌ಗೆ ಆಯ್ಕೆ ಮಾಡಿತ್ತು ಹಾಗೂ ಆರಂಭದಲ್ಲಿ ನಡೆದಿದ್ದ ಅಭ್ಯಾಸ ಪಂದ್ಯಗಳಲ್ಲಿ ಅವಕಾಶ ನೀಡಿತ್ತು. ಈ ವೇಳೆ ನೀವು ನಿಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತು ಪಡಿಸಬೇಕಾಗುತ್ತದೆ. ಅಭ್ಯಾಸದ ಪಂದ್ಯಗಳಲ್ಲಿ ತಂಡ ನನ್ನನ್ನು ಅತ್ಯಂತ ಹತ್ತಿರದಿಂದ ನೋಡಿತ್ತು ಹಾಗೂ ನನ್ನ ಮೇಲೆ ಹೆಚ್ಚಿನ ಕಾಳಜಿ ವಹಿಸಿತ್ತು,”ಎಂದು ಮಧ್ವಾಲ್‌ ತಿಳಿಸಿದ್ದಾರೆ.

“ಕಳೆದ ವರ್ಷ ಮುಂಬೈ ಇಂಡಿಯನ್ಸ್ ಪರ ಎರಡು ಪಂದ್ಯಗಳಲ್ಲಿ ಆಡಿದ್ದೆ. ಮುಂದಿನ ವರ್ಷ ನನಗೆ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ ಎಂ ಬಗ್ಗೆ ನನಗೆ ಕಳೆದ ವರ್ಷವೇ ಖಚಿತವಾಗಿತ್ತು,” ಎಂದು ಮುಂಬೈ ಇಂಡಿಯನ್ಸ್ ವೇಗಿ ಹೇಳಿದ್ದಾರೆ.

ಜಸ್‌ಪ್ರೀತ್‌ ಬುಮ್ರಾ ಸಂಪೂರ್ಣ ಫಿಟ್‌ ಇಲ್ಲದ ಕಾರಣ 2023ರ ಐಪಿಎಲ್‌ ಟೂರ್ನಿಯಿಂದ ಸಂಪೂರ್ಣವಾಗಿ ಹೊರ ಬಿದ್ದಿದ್ದರು. ಮತ್ತೊಂದೆಡೆ ಜೋಫ್ರಾ ಆರ್ಚರ್‌ ಅವರು ಗಾಯದಿಂದಾಗಿ ಪೂರ್ಣ ಪ್ರಮಾಣದಲ್ಲಿ ಮುಂಬೈ ಇಂಡಿಯನ್ಸ್‌ಗೆ ಲಭ್ಯರಾಗಲಿಲ್ಲ. ಅವರು ಕೆಲ ಪಂದ್ಯಗಳನ್ನು ಆಡಿದ ಬಳಿಕ ತವರಿಗೆ ಮರಳಿದ್ದಾರೆ.

ನನ್ನ ಬಗ್ಗೆ ರೋಹಿತ್‌ ಶರ್ಮಾಗೂ ತಿಳಿದಿತ್ತು: ಮಧ್ವಾಲ್‌

“ತಂಡ ನನಗೆ ಯಾವ ಜವಾಬ್ದಾರಿ ನೀಡಿದೆ, ಅದನ್ನು ಪರಿಪೂರ್ಣಗೊಳಿಸಲು ಪ್ರಯತ್ನಿಸುತ್ತದ್ದೇನೆ. ಅಂದ ಹಾಗೆ ಜಸ್‌ಪ್ರೀತ್‌ ಬುಮ್ರಾ ಅವರ ಸ್ಥಾನದಲ್ಲಿ ನಾನು ಆಡುತ್ತಿಲ್ಲ. ಆದರೆ, ನನ್ನಿಂದ ಸಾಧ್ಯವಾದಷ್ಟು ಉತ್ತಮ ಪ್ರದರ್ಶನ ತೋರಲು ಪ್ರಯತ್ನಿಸುತ್ತಿದ್ದೇನೆ ಅಷ್ಟೆ,” ಎಂದು ಆಕಾಶ್‌ ಮಧ್ವಾಲ್‌ ತಿಳಿಸಿದ್ದಾರೆ.

“ಯಾರ್ಕರ್‌ಗಳು ನನ್ನ ಬೌಲಿಂಗ್‌ನಲ್ಲಿ ಪ್ರಮುಖ ಅಸ್ತ್ರ ಎಂಬುದು ರೋಹಿತ್‌ ಭಾಯ್‌ಗೆ ತಿಳಿದಿದೆ. ನೆಟ್ಸ್‌ ಹಾಗೂ ಅಭ್ಯಾಸ ಪಂದ್ಯಗಳಲ್ಲಿ ನನ್ನ ಬೌಲಿಂಗ್‌ ನೋಡಿದ್ದ ಅವರು, ನಾನು ಹೊಸ ಚೆಂಡಿನಲ್ಲಿಯೂ ಬೌಲ್‌ ಮಾಡಬಲ್ಲೆ ಎಂಬುದನ್ನು ಅವರು ಅರಿತ್ತಿದ್ದರು. ಹಾಗಾಗಿ ಸನ್ನಿವೇಶ ತಕ್ಕಂತೆ ನನ್ನನ್ನು ಹೇಗೆ ಬದಲಾಯಿಸಿಕೊಳ್ಳಬೇಕೆಂದು ಅವರಿಗೆ ತಿಳಿದಿದೆ,” ಎಂದು ಉತ್ತರಾಖಂಡ ಮೂಲದ ವೇಗಿ ಹೇಳಿದ್ದಾರೆ.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

8 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

11 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

12 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

12 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

12 hours ago