ಕ್ರೀಡೆ

ಐಪಿಎಲ್‌ 2023: ರೋಚಕ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಐಪಿಎಲ್ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್ ಗಳ ಗೆಲುವು ಸಾಧಿಸಿದೆ.

ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು . ಆರ್ ಸಿಬಿ ಪರ ನಾಯಕ ಕೊಹ್ಲಿ ಶೂನ್ಯಕ್ಕೆ ಔಟಾದರು. ಡು ಪ್ಲೆಸಿಸ್ 62 ರನ್ ಗಳಿಸಿದ್ದ ವೇಳೆ ರನ್ ಔಟ್ (ಯಶಸ್ವಿ ಜೈಸ್ವಾಲ್) ಆದರು. ಮ್ಯಾಕ್ಸ್‌ವೆಲ್ 44 ಎಸೆತಗಳಲ್ಲಿ 77 ರನ್ ಗಳಿಸಿ ಅಬ್ಬರಿಸಿದರು.9 ವಿಕೆಟ್ ನಷ್ಟಕ್ಕೆ 189 ಗಳಿಸಿತು.

ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 6 ವಿಕೆಟ್ ನಷ್ಟಕ್ಕೆ 182 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.ಯಶಸ್ವಿ ಜೈಸ್ವಾಲ್ 47 ರನ್ ಗಳಿಸಿದ್ದ ವೇಳೆ ಹರ್ಷಲ್ ಪಟೇಲ್ ಎಸೆದ ಚೆಂಡನ್ನು ಕೊಹ್ಲಿಕೈಗಿತ್ತು ನಿರ್ಗಮಿಸಿದರು. ಜೋಸ್ ಬಟ್ಲರ್ ಅವರನ್ನು ಖಾತೆ ತೆರೆಯುವ ಮುನ್ನವೇ ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು.

ಉತ್ತಮ ಆಟವಾಡಿದ ದೇವದತ್ ಪಡಿಕ್ಕಲ್ 52 ರನ್ ಗಳಿಸಿ ಔಟಾದರು. ಸಂಜು ಸ್ಯಾಮ್ಸನ್ 22 ರನ್ ಗಳಿಗೆ ಔಟಾದರು. ರನ್ ಗಳಿಸಲು ಪರದಾಡಿದ ಶಿಮ್ರಾನ್ ಹೆಟ್ಮೆಯರ್ 3 ರನ್ ಗಳಿಸಿದ್ದ ವೇಳೆ ರನ್ ಔಟ್ ಆದರು. ಧ್ರುವ್ ಜುರೆಲ್ ಔಟಾಗದೆ 34 ರನ್ ಗಳಿಸಿದರೂ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ. ಕೊನೆಯ ಓವರ್ ನಲ್ಲಿ ರವಿಚಂದ್ರನ್ ಅಶ್ವಿನ್ 12 ರನ್ ಗಳಿಸಿದ್ದ ವೇಳೆ ಔಟಾದರು. ಹರ್ಷಲ್ ಪಟೇಲ್ 32 ಕ್ಕೆ 3 ವಿಕೆಟ್ ಪಡೆದು ಗಮನ ಸೆಳೆದರು.

ಆರ್ ಸಿಬಿ ಆಡಿದ 7 ಪಂದ್ಯಗಳಲ್ಲಿ 4 ಗೆದ್ದಿದ್ದು 3ರಲ್ಲಿ ಸೋಲು ಅನುಭವಿಸಿದೆ. 8 ಅಂಕಗಳೊಂದಿಗೆ (-0.008 ರನ್ ರೇಟ್ )5 ನೇ ಸ್ಥಾನದಲ್ಲಿದೆ.

ಕಿಂಗ್ ಕೊಹ್ಲಿಗೆ ಮತ್ತೊಂದು ಶತಕ ದಾಖಲೆ ಬರೆದಿದ್ದಾರೆ. ಇದು ಐಪಿಎಲ್ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಐಪಿಎಲ್‌ನಲ್ಲಿ ಈ ಮೈಲಿಗಲ್ಲನ್ನು ತಲುಪಿದ ಮೂರನೇ ಆಟಗಾರ ವಿರಾಟ್ ಆಗಿದ್ದಾರೆ.

“ಗೋ ಗ್ರೀನ್‌’ ಅಭಿ ಯಾನದ ಅಂಗವಾಗಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡಿತು. ಈ ಉಡುಗೆ ತವರಿನಲ್ಲಿ ಕೊಹ್ಲಿ ಬಳಗಕ್ಕೆ ಜಯಸಿರಿಯ ಅದೃಷ್ಟ ತಂದುಕೊಟ್ಟಿತು.

ಪಂದ್ಯಶ್ರೇಷ್ಠ: ಗ್ಲೆನ್‌ ಮ್ಯಾಕ್ಸ್‌ವೆಲ್‌

 

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago