ಕ್ರೀಡೆ

IPL 2023: ಗುಜರಾತ್‌ಗೆ ಆಘಾತ, ಕೋಲ್ಕತ್ತ ನೈಟ್ ರೈಡರ್ಸ್‌ಗೆ ಐತಿಹಾಸಿಕ ಗೆಲುವು

ಅಹಮದಾಬಾದ್: ರಿಂಕು ಸಿಂಗ್ ಸಿಡಿಸಿದ ಸತತ ಐದು ಸಿಕ್ಸರ್‌ಗಳ ಬಲದಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ರೋಚಕ ಜಯ ದಾಖಲಿಸಿತು. ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚನೆಯಾಯಿತು.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಗುಜರಾತ್ ತಂಡವು ನೀಡಿದ್ದ 205 ರನ್‌ಗಳ ಗುರಿಯನ್ನು ಕೋಲ್ಕತ್ತ ಬೆನ್ನಟ್ಟಿತ್ತು. ಕೊನೆಯ ಓವರ್‌ನಲ್ಲಿ ಗೆಲುವಿಗೆ 29 ರನ್‌ಗಳ ಅಗತ್ಯವಿತ್ತು. ಬಹುತೇಕ ಅಸಾಧ್ಯ ಎಂಬಂತಿದ್ದ ಭಾವನೆಯನ್ನು ರಿಂಕು ತಲೆಕೆಳಗು ಮಾಡಿದರು.

ಮಧ್ಯಮವೇಗಿ ಯಶ್ ದಯಾಳ್ 20ನೇ ಓವರ್‌ ಬೌಲಿಂಗ್ ಮಾಡಿದರು. ಅವರ ಮೊದಲ ಎಸೆತವನ್ನು ಎದುರಿಸಿದ ಉಮೇಶ್ ಯಾದವ್ ಒಂದು ರನ್‌ ಪಡೆಯುವಲ್ಲಿ ಯಶಸ್ವಿಯಾದರು. ಸ್ಟ್ರೈಕ್‌ಗೆ ಬಂದ ರಿಂಕು ಸಿಂಗ್ ಆಸಾಧ್ಯ ಸವಾಲನ್ನು ‘ಸಾಧ್ಯ’ ಮಾಡಿದರು.

ನಂತರ ಐದು ಎಸೆತಗಳಲ್ಲಿಯೂ ಸಿಕ್ಸರ್‌ಗಳನ್ನು ಎತ್ತಿದರು. ಮೂರು ಫುಲ್‌ ಟಾಸ್, ಒಂದು ಲೆಂಗ್ತ್ ಮತ್ತು ಒಂದು ನಿಧಾನಗತಿಯ ಶಾರ್ಟ್‌ ಎಸೆತಗಳನ್ನು ಪ್ರೇಕ್ಷಕರ ಗ್ಯಾಲರಿಗೆ ಕಳಿಸುವಲ್ಲಿ ಎಡಗೈ ಬ್ಯಾಟರ್ ರಿಂಕು ಯಶಸ್ವಿಯಾದರು.

ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ಮತ್ತು ಸಹ ಆಟಗಾರರು ಕ್ರೀಡಾಂಗಣಕ್ಕೆ ಧಾವಿಸಿದರು. ರಿಂಕು ಸಿಂಗ್ ಅವರನ್ನು ಅಪ್ಪಿಕೊಂಡು ಸಂಭ್ರಮಿಸಿದರು. ಇತ್ತ ಯಶ್ ದಯಾಳ್ ಕಣ್ಣೀರು ಹಾಕುತ್ತ ಕುಸಿದರು. ಗುಜರಾತ್ ತಂಡದ ಸಹ ಆಟಗಾರರು ಅವರನ್ನು ಸಂತೈಸಿದರು.

ಈ ಆವೃತ್ತಿಯಲ್ಲಿ ಮೂರನೇ ಪಂದ್ಯವಾಡಿದ ಗುಜರಾತ್‌ಗೆ ಇದು ಮೊದಲ ಸೋಲು. ಕೆಕೆಆರ್‌ಗೆ ಎರಡನೇ ಗೆಲುವು. ಈಚೆಗೆ ತನ್ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತ ತಂಡವು ಆರ್‌ಸಿಬಿ ಎದುರು ಜಯಿಸಿತ್ತು.

ಮೊದಲೆರಡು ಪಂದ್ಯಗಳನ್ನು ಜಯಿಸಿ ಆತ್ಮವಿಶ್ವಾಸದಲ್ಲಿದ್ದ ಗುಜರಾತ್ ಬಳಗವು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿತು.

ಸಾಯಿ ಸುದರ್ಶನ್ (53; 38ಎ, 4X3) ಹಾಗೂ ವಿಜಯ್ ಶಂಕರ್ (ಔಟಾಗದೆ 63: 24ಎ, 4X4, 6X5) ಅವರ ಅರ್ಧಶತಕಗಳ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 204 ರನ್‌ ಗಳಿಸಿತು. ಕೆಕೆಆರ್ ತಂಡದ ಸುನೀಲ್ ನಾರಾಯಣ್ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಹಾರ್ದಿಕ್ ಪಾಂಡ್ಯ ಗೈರು ಹಾಜರಿಯಲ್ಲಿ ತಂಡವನ್ನು ಮುನ್ನಡೆಸಿದ ರಶೀದ್ ಖಾನ್ ಬೌಲಿಂಗ್‌ನಲ್ಲಿ ಯಶಸ್ವಿಯಾದರು. ಆದರೆ ಬೌಲರ್‌ಗಳ ನಿಯೋಜನೆಯಲ್ಲಿ ಎಡವಿದರು.

ಗುರಿ ಬೆನ್ನಟ್ಟಿದ್ದ ಕೋಲ್ಕತ್ತ ತಂಡಕ್ಕೆ ಆರಂಭದಲ್ಲಿಯೇ ಮೊಹಮ್ಮದ್ ಶಮಿ ಮತ್ತು ಜೋಶುವ ಲಿಟಲ್ ಪೆಟ್ಟುಕೊಟ್ಟಿದ್ದರು. ಆದರೆ, ವೆಂಕಟೇಶ್ ಅಯ್ಯರ್ (83; 40ಎ) ಹಾಗೂ ನಿತೀಶ್ ರಾಣಾ (45; 29ಎ) ಅವರು ತಂಡದ ಹೋರಾಟವನ್ನು ಜೀವಂತವಾಗಿಟ್ಟರು.

ಆದರೆ ಅವರಿಬ್ಬರೂ ಔಟಾದ ನಂತರ ಇನಿಂಗ್ಸ್ ಹೊಣೆ ರಿಂಕು ಸಿಂಗ್ ಮೇಲೆ ಬಿತ್ತು. ರಸೆಲ್, ಸುನೀಲ್, ಶಾರ್ದೂಲ್ ಅವರು ಹೀಗೆ ಬಂದು ಹಾಗೆ ಹೋದರು. ಈ ನಡುವೆಯೂ ಆಬ್ಬರಿಸಿದ ಉತ್ತರಪ್ರದೇಶದ ಹುಡುಗ ರಿಂಕು ತಂಡವನ್ನು ಗೆಲ್ಲಿಸಿದರು.

andolanait

Recent Posts

ಬಜೆಟ್‌ ಮಂಡಿಸಲು ಕಾಂಜೀವರಂ ಸೀರೆ ಆಯ್ಕೆ ಮಾಡಿಕೊಂಡ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 2026-27ನೇ ಸಾಲಿನ ಬಜೆಟ್‌ ಮಂಡನೆ ಮಾಡಲಿದ್ದು, ಇದು ಅವರ…

41 seconds ago

ಕೆಂಪು ಬಹಿ-ಖಾತಾ ಶೈಲಿಯ ಚೀಲದಲ್ಲಿ ಟ್ಯಾಬ್ಲೆಟ್‌ ಹಿಡಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್‌ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ…

25 mins ago

75 ವರ್ಷದ ಸಂಪ್ರದಾಯ ಮುರಿಯಲಿರುವ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 9ನೇ ಬಜೆಟ್‌ ಮಂಡನೆ…

54 mins ago

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…

4 hours ago

ಕಣಗಾಲ್ ಪುಟ್ಟಣ್ಣನವರ ಕರುಣಾಜನಕ ಮನೆ

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…

4 hours ago

ಮುದ್ದಿನ ಬೆಕ್ಕುಗಳಿಗೆ ಬೆಚ್ಚಗಿನ ಸಂಗ್ರಹಾಲಯ

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…

4 hours ago