ಕ್ರೀಡೆ

IPL 2023: ಗುಜರಾತ್‌ಗೆ ಆಘಾತ, ಕೋಲ್ಕತ್ತ ನೈಟ್ ರೈಡರ್ಸ್‌ಗೆ ಐತಿಹಾಸಿಕ ಗೆಲುವು

ಅಹಮದಾಬಾದ್: ರಿಂಕು ಸಿಂಗ್ ಸಿಡಿಸಿದ ಸತತ ಐದು ಸಿಕ್ಸರ್‌ಗಳ ಬಲದಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ರೋಚಕ ಜಯ ದಾಖಲಿಸಿತು. ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚನೆಯಾಯಿತು.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಗುಜರಾತ್ ತಂಡವು ನೀಡಿದ್ದ 205 ರನ್‌ಗಳ ಗುರಿಯನ್ನು ಕೋಲ್ಕತ್ತ ಬೆನ್ನಟ್ಟಿತ್ತು. ಕೊನೆಯ ಓವರ್‌ನಲ್ಲಿ ಗೆಲುವಿಗೆ 29 ರನ್‌ಗಳ ಅಗತ್ಯವಿತ್ತು. ಬಹುತೇಕ ಅಸಾಧ್ಯ ಎಂಬಂತಿದ್ದ ಭಾವನೆಯನ್ನು ರಿಂಕು ತಲೆಕೆಳಗು ಮಾಡಿದರು.

ಮಧ್ಯಮವೇಗಿ ಯಶ್ ದಯಾಳ್ 20ನೇ ಓವರ್‌ ಬೌಲಿಂಗ್ ಮಾಡಿದರು. ಅವರ ಮೊದಲ ಎಸೆತವನ್ನು ಎದುರಿಸಿದ ಉಮೇಶ್ ಯಾದವ್ ಒಂದು ರನ್‌ ಪಡೆಯುವಲ್ಲಿ ಯಶಸ್ವಿಯಾದರು. ಸ್ಟ್ರೈಕ್‌ಗೆ ಬಂದ ರಿಂಕು ಸಿಂಗ್ ಆಸಾಧ್ಯ ಸವಾಲನ್ನು ‘ಸಾಧ್ಯ’ ಮಾಡಿದರು.

ನಂತರ ಐದು ಎಸೆತಗಳಲ್ಲಿಯೂ ಸಿಕ್ಸರ್‌ಗಳನ್ನು ಎತ್ತಿದರು. ಮೂರು ಫುಲ್‌ ಟಾಸ್, ಒಂದು ಲೆಂಗ್ತ್ ಮತ್ತು ಒಂದು ನಿಧಾನಗತಿಯ ಶಾರ್ಟ್‌ ಎಸೆತಗಳನ್ನು ಪ್ರೇಕ್ಷಕರ ಗ್ಯಾಲರಿಗೆ ಕಳಿಸುವಲ್ಲಿ ಎಡಗೈ ಬ್ಯಾಟರ್ ರಿಂಕು ಯಶಸ್ವಿಯಾದರು.

ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ಮತ್ತು ಸಹ ಆಟಗಾರರು ಕ್ರೀಡಾಂಗಣಕ್ಕೆ ಧಾವಿಸಿದರು. ರಿಂಕು ಸಿಂಗ್ ಅವರನ್ನು ಅಪ್ಪಿಕೊಂಡು ಸಂಭ್ರಮಿಸಿದರು. ಇತ್ತ ಯಶ್ ದಯಾಳ್ ಕಣ್ಣೀರು ಹಾಕುತ್ತ ಕುಸಿದರು. ಗುಜರಾತ್ ತಂಡದ ಸಹ ಆಟಗಾರರು ಅವರನ್ನು ಸಂತೈಸಿದರು.

ಈ ಆವೃತ್ತಿಯಲ್ಲಿ ಮೂರನೇ ಪಂದ್ಯವಾಡಿದ ಗುಜರಾತ್‌ಗೆ ಇದು ಮೊದಲ ಸೋಲು. ಕೆಕೆಆರ್‌ಗೆ ಎರಡನೇ ಗೆಲುವು. ಈಚೆಗೆ ತನ್ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತ ತಂಡವು ಆರ್‌ಸಿಬಿ ಎದುರು ಜಯಿಸಿತ್ತು.

ಮೊದಲೆರಡು ಪಂದ್ಯಗಳನ್ನು ಜಯಿಸಿ ಆತ್ಮವಿಶ್ವಾಸದಲ್ಲಿದ್ದ ಗುಜರಾತ್ ಬಳಗವು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿತು.

ಸಾಯಿ ಸುದರ್ಶನ್ (53; 38ಎ, 4X3) ಹಾಗೂ ವಿಜಯ್ ಶಂಕರ್ (ಔಟಾಗದೆ 63: 24ಎ, 4X4, 6X5) ಅವರ ಅರ್ಧಶತಕಗಳ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 204 ರನ್‌ ಗಳಿಸಿತು. ಕೆಕೆಆರ್ ತಂಡದ ಸುನೀಲ್ ನಾರಾಯಣ್ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಹಾರ್ದಿಕ್ ಪಾಂಡ್ಯ ಗೈರು ಹಾಜರಿಯಲ್ಲಿ ತಂಡವನ್ನು ಮುನ್ನಡೆಸಿದ ರಶೀದ್ ಖಾನ್ ಬೌಲಿಂಗ್‌ನಲ್ಲಿ ಯಶಸ್ವಿಯಾದರು. ಆದರೆ ಬೌಲರ್‌ಗಳ ನಿಯೋಜನೆಯಲ್ಲಿ ಎಡವಿದರು.

ಗುರಿ ಬೆನ್ನಟ್ಟಿದ್ದ ಕೋಲ್ಕತ್ತ ತಂಡಕ್ಕೆ ಆರಂಭದಲ್ಲಿಯೇ ಮೊಹಮ್ಮದ್ ಶಮಿ ಮತ್ತು ಜೋಶುವ ಲಿಟಲ್ ಪೆಟ್ಟುಕೊಟ್ಟಿದ್ದರು. ಆದರೆ, ವೆಂಕಟೇಶ್ ಅಯ್ಯರ್ (83; 40ಎ) ಹಾಗೂ ನಿತೀಶ್ ರಾಣಾ (45; 29ಎ) ಅವರು ತಂಡದ ಹೋರಾಟವನ್ನು ಜೀವಂತವಾಗಿಟ್ಟರು.

ಆದರೆ ಅವರಿಬ್ಬರೂ ಔಟಾದ ನಂತರ ಇನಿಂಗ್ಸ್ ಹೊಣೆ ರಿಂಕು ಸಿಂಗ್ ಮೇಲೆ ಬಿತ್ತು. ರಸೆಲ್, ಸುನೀಲ್, ಶಾರ್ದೂಲ್ ಅವರು ಹೀಗೆ ಬಂದು ಹಾಗೆ ಹೋದರು. ಈ ನಡುವೆಯೂ ಆಬ್ಬರಿಸಿದ ಉತ್ತರಪ್ರದೇಶದ ಹುಡುಗ ರಿಂಕು ತಂಡವನ್ನು ಗೆಲ್ಲಿಸಿದರು.

andolanait

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

12 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

13 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

16 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago