ಕ್ರೀಡೆ

IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ರೋಚಕ ಜಯ

 

ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪಂಜಾಬ್‌ ಕಿಂಗ್ಸ್‌ ವಿರುದ್ಧ 9 ರನ್‌ಗಳ ಗೆಲುವನ್ನು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆರಿಸಿಕೊಂಡು ಮುಂಬೈ ಇಂಡಿಯನ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಮುಂಬೈ ಸೂರ್ಯಕುಮಾರ್‌ ಯಾದವ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ ಕಲೆಹಾಕಿ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ 193 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಪಂಜಾಬ್‌ ಕಿಂಗ್ಸ್‌ 19.1 ಓವರ್‌ಗಳಲ್ಲಿ 183 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಇಶಾನ್‌ ಕಿಶನ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಇಶಾನ್‌ ಕಿಶನ್‌ 8 (8) ರನ್‌ ಗಳಿಸಿ ಬೇಗನೆ ನಿರ್ಗಮಿಸಿದರೆ, ಎರಡನೇ ವಿಕೆಟ್‌ಗೆ ಸೂರ್ಯಕುಮಾರ್‌ ಜತೆಗೂಡಿ 81 ರನ್‌ಗಳ ಜತೆಯಾಟವಾಡಿದ ರೋಹಿತ್‌ ಶರ್ಮಾ 36 (25) ರನ್‌ ಬಾರಿಸಿದರು. ಸೂರ್ಯಕುಮಾರ್‌ ಯಾದವ್‌ 78 (53) ರನ್‌ ಬಾರಿಸಿ ಉತ್ತಮ ಪ್ರದರ್ಶನ ನೀಡಿದರು. ಇನ್ನುಳಿದಂತೆ ನಾಯಕ ಹಾರ್ದಿಕ್‌ ಪಾಂಡ್ಯ 10 (6) ರನ್‌, ಟಿಮ್‌ ಡೇವಿಡ್‌ 14 (7) ರನ್‌, ರೊಮಾರಿಯೊ ಶೆಫರ್ಡ್‌ 1 (2) ರನ್‌, ಮೊಹಮ್ಮದ್‌ ನಬಿ ಡಕ್‌ಔಟ್ ಮತ್ತು ತಿಲಕ್‌ ವರ್ಮಾ ಅಜೇಯ ‌34 (18) ರನ್‌ ಬಾರಿಸಿದರು.

ಪಂಜಾಬ್‌ ಕಿಂಗ್ಸ್‌ ಪರ ಹರ್ಷಲ್‌ ಪಟೇಲ್‌ 3, ಸಾಮ್‌ ಕರನ್‌ 2 ವಿಕೆಟ್‌ ಹಾಗೂ ಕಗಿಸೊ ರಬಾಡಾ 1 ವಿಕೆಟ್‌ ಪಡೆದರು.

ಪಂಜಾಬ್‌ ಕಿಂಗ್ಸ್‌: ಮುಂಬೈ ನೀಡಿದ ಗುರಿ ಬೆನ್ನಟ್ಟಲು ಯತ್ನಿಸಿದ ಪಂಜಾಬ್‌ಗೆ ಟಾಪ್‌ ಆರ್ಡರ್‌ ಕೈಕೊಟ್ಟಿತು. ತಂಡ 2.1 ಓವರ್‌ನಲ್ಲಿಯೇ ಕೇವಲ 14 ರನ್‌ಗಳಿಗೆ ತನ್ನ ಮೊದಲ 4 ವಿಕೆಟ್‌ ಕಳೆದುಕೊಂಡಿತು. ಹೀಗೆ ಪವರ್‌ಪ್ಲೇನಲ್ಲೇ ಹೀನಾಯ ಆರಂಭ ಪಡೆದ ತಂಡಕ್ಕೆ ಶಶಾಂಕ್‌ ಸಿಂಗ್‌ ತುಸು ಚೇತರಿಕೆ ತಂದರು. ಬಳಿಕ ಅಬ್ಬರಿಸಿದ ಅಶುತೋಷ್‌ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿದರಾದರೂ ಅಂತಿಮ ಹಂತದಲ್ಲಿ ವಿಕೆಟ್‌ ಒಪ್ಪಿಸಿದರು. ನಾಯಕ ಸಾಮ್‌ ಕರನ್‌ 6 (7) ರನ್‌, ಪ್ರಭ್‌ಸಿಮ್ರಾನ್‌ ಸಿಂಗ್‌ ಗೋಲ್ಡನ್‌ ಡಕ್‌, ರಿಲೇ ರೊಸ್ಸೊ 1 (3) ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 1 (2) ರನ್‌, ಹರ್‌ಪ್ರೀತ್‌ ಸಿಂಗ್‌ ಭಾಟಿಯಾ 13 (15) ರನ್‌, ಜಿತೇಶ್‌ ಶರ್ಮಾ 9 (9) ರನ್‌ ಗಳಿಸಿದರು. ಶಶಾಂಕ್‌ ಸಿಂಗ್‌ 41 (25) ರನ್‌ ಗಳಿಸಿ ಅಬ್ಬರಿಸಿದರೆ, ಅಶುತೋಷ್‌ ಶರ್ಮಾ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 61 ರನ್‌ ಬಾರಿಸಿದರು. ಹರ್‌ಪ್ರೀತ್‌ ಬ್ರಾರ್‌ 21 (20) ರನ್‌, ಕಗಿಸೊ ರಬಾಡಾ 8 (3) ರನ್‌ ಮತ್ತು ಹರ್ಷಲ್‌ ಪಟೇಲ್‌ ಅಜೇಯ 1 (4) ರನ್‌ ಕಲೆಹಾಕಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 3 ವಿಕೆಟ್, ಗೆರಾಲ್ಡ್‌ ಸೋಟ್ಜೆ ‌3 ವಿಕೆಟ್‌, ಆಕಾಶ್‌ ಮಧ್ವಲ್‌, ನಾಯಕ ಹಾರ್ದಿಕ್‌ ಪಾಂಡ್ಯ ಹಾಗೂ ಶ್ರೇಯಸ್‌ ಗೋಪಾಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago