ಕ್ರೀಡೆ

IPL 2024: ಗುಜರಾತ್‌ಗೆ ಹೀನಾಯ ಸೋಲು: ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ !

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಲ್‌ ಟೂರ್ನಿಯ ಏಳನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕೀಂಗ್ಸ್‌ 63 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 6 ಕಳೆದುಕೊಂಡು 206 ರನ್‌ ಗಳಿಸಿ 207 ಟಾರ್ಗೆಟ್‌ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 143 ರನ್‌ ಕೆಲಹಾಕಿ ಸೋಲೊಪ್ಪಿಕೊಂಡಿದೆ.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ನಾಯಕರ ಋತುರಾಜ್‌ ಗಾಯಕ್ವಾಡ್‌ ಮತ್ತು ಯುವ ಬ್ಯಾಟರ್‌ ರಚಿನ್‌ ರವೀಂದ್ರ ಅದ್ಭುತವಾಗಿ ಇನ್ನಿಂಗ್ಸ್‌ ಕಟ್ಟಿದರು.
ಈ ಜೋಡಿ ಮೊದಲ ವಿಕೆಟ್‌ಗೆ 62 ರನ್‌ ಗಳ ಜೊತೆಯಾಟ ಆಡಿದರು. ಆರಂಭದಿಂದಲೇ ಸಿಡಿದ ರಚಿನ್‌ ಕೇವಲ 20 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 46 ರನ್‌ ಚಚ್ಚಿ ನಿರ್ಗಮಿಸಿದರು. ನಂತರ ಬಂದ ಅಜಿಂಕೆ ರಹಾನೆ (12) ಬೇಗನೆ ಪೆವಿಲಿಯನ್‌ ಸೇರಿಕೊಂಡರು. ನಾಯಕ ಋತುರಾಜ್‌ (46) ಕಲೆಹಾಕಿ ಔಟಾದರು.

ಬಳಿಕ ಜೊತೆಯಾದ ಡೆರಿಯಲ್‌ ಮಿಚೆಲ್‌ ಮತ್ತು ಶಿವಂ ದುಬೆ ಉತ್ತಮವಾಗಿ ಇನ್ನಿಂಗ್ಸ್‌ ಕಟ್ಟಿದರು. ಮಿಚೆಲ್‌ (24) ಬಾರಿಸಿದರೇ, ಶಿವಂ ದುಬೆ ತಾವೆದುರಿಸಿದ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ (51) ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಅಬ್ಬರಿಸಿ ಸಮೀರ್‌ ರಿಜ್ವಿ (14) ಮತ್ತು ಜಡೇಜಾ (7) ರನ್‌ ಬಾರಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟುವಲ್ಲಿ ಶ್ರಮ ವಹಿಸಿದರು.

ಗುಜರಾತ್‌ ಪರ ರಶೀದ್‌ ಖಾನ್‌ 2 ವಿಕೆಟ್‌ ಪಡೆದರೇ, ಸಾಯ್‌ ಕಿಶೋರ್‌, ಮೋಹಿತ್‌ ಶರ್ಮಾ ಮತ್ತು ಸ್ಪೆನ್ಸರ್‌ ಜಾನ್ಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡಕ್ಕೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ನಾಯಕ ಶುಭ್‌ಮನ್‌ ಗಿಲ್‌ (8) ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ವೃದ್ಧಿಮಾನ್‌ ಶಾ (21) ಸ್ವಲ್ಪ ಅಬ್ಬರಿಸಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗಲಿಲ್ಲ. ವಿಜಯ್‌ ಶಂಕರ್‌ (12), ಡೆವಿಡ್‌ ಮಿಲ್ಲರ್‌ (21), ಸಾಯ್‌ ಸುದರ್ಶನ್‌ (37), ಓಮರ್ಜಾಯ್‌ (11), ತೆವಾಟಿಯಾ (6) ರಶೀದ್‌ ಖಾನ್‌ (1), ಉಮೇಶ್‌ ಯಾದವ್‌ ಔಟಾಗದೇ (10) ಮತ್ತು ಸ್ಪೆನ್ಸರ್‌ ಜಾನ್ಸನ್‌ ಔಟಾಗದೇ (5) ರನ್‌ ಗಳಿಸಿದರು.

ಸಿಎಸ್‌ಕೆ ಪರ ದೀಪಕ್‌ ಚಾಹರ್‌, ಮುಸ್ತಿಫೀಜುರ್‌ ರೆಹಮಾನ್‌ ಮತ್ತು ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕೆಟ್‌ ಪಡೆದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

36 mins ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

51 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

3 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

13 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

14 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

14 hours ago