ಕ್ರೀಡೆ

IPL 2024: ಗುಜರಾತ್‌ಗೆ ಹೀನಾಯ ಸೋಲು: ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ !

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಲ್‌ ಟೂರ್ನಿಯ ಏಳನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕೀಂಗ್ಸ್‌ 63 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 6 ಕಳೆದುಕೊಂಡು 206 ರನ್‌ ಗಳಿಸಿ 207 ಟಾರ್ಗೆಟ್‌ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 143 ರನ್‌ ಕೆಲಹಾಕಿ ಸೋಲೊಪ್ಪಿಕೊಂಡಿದೆ.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ನಾಯಕರ ಋತುರಾಜ್‌ ಗಾಯಕ್ವಾಡ್‌ ಮತ್ತು ಯುವ ಬ್ಯಾಟರ್‌ ರಚಿನ್‌ ರವೀಂದ್ರ ಅದ್ಭುತವಾಗಿ ಇನ್ನಿಂಗ್ಸ್‌ ಕಟ್ಟಿದರು.
ಈ ಜೋಡಿ ಮೊದಲ ವಿಕೆಟ್‌ಗೆ 62 ರನ್‌ ಗಳ ಜೊತೆಯಾಟ ಆಡಿದರು. ಆರಂಭದಿಂದಲೇ ಸಿಡಿದ ರಚಿನ್‌ ಕೇವಲ 20 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 46 ರನ್‌ ಚಚ್ಚಿ ನಿರ್ಗಮಿಸಿದರು. ನಂತರ ಬಂದ ಅಜಿಂಕೆ ರಹಾನೆ (12) ಬೇಗನೆ ಪೆವಿಲಿಯನ್‌ ಸೇರಿಕೊಂಡರು. ನಾಯಕ ಋತುರಾಜ್‌ (46) ಕಲೆಹಾಕಿ ಔಟಾದರು.

ಬಳಿಕ ಜೊತೆಯಾದ ಡೆರಿಯಲ್‌ ಮಿಚೆಲ್‌ ಮತ್ತು ಶಿವಂ ದುಬೆ ಉತ್ತಮವಾಗಿ ಇನ್ನಿಂಗ್ಸ್‌ ಕಟ್ಟಿದರು. ಮಿಚೆಲ್‌ (24) ಬಾರಿಸಿದರೇ, ಶಿವಂ ದುಬೆ ತಾವೆದುರಿಸಿದ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ (51) ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಅಬ್ಬರಿಸಿ ಸಮೀರ್‌ ರಿಜ್ವಿ (14) ಮತ್ತು ಜಡೇಜಾ (7) ರನ್‌ ಬಾರಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟುವಲ್ಲಿ ಶ್ರಮ ವಹಿಸಿದರು.

ಗುಜರಾತ್‌ ಪರ ರಶೀದ್‌ ಖಾನ್‌ 2 ವಿಕೆಟ್‌ ಪಡೆದರೇ, ಸಾಯ್‌ ಕಿಶೋರ್‌, ಮೋಹಿತ್‌ ಶರ್ಮಾ ಮತ್ತು ಸ್ಪೆನ್ಸರ್‌ ಜಾನ್ಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡಕ್ಕೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ನಾಯಕ ಶುಭ್‌ಮನ್‌ ಗಿಲ್‌ (8) ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ವೃದ್ಧಿಮಾನ್‌ ಶಾ (21) ಸ್ವಲ್ಪ ಅಬ್ಬರಿಸಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗಲಿಲ್ಲ. ವಿಜಯ್‌ ಶಂಕರ್‌ (12), ಡೆವಿಡ್‌ ಮಿಲ್ಲರ್‌ (21), ಸಾಯ್‌ ಸುದರ್ಶನ್‌ (37), ಓಮರ್ಜಾಯ್‌ (11), ತೆವಾಟಿಯಾ (6) ರಶೀದ್‌ ಖಾನ್‌ (1), ಉಮೇಶ್‌ ಯಾದವ್‌ ಔಟಾಗದೇ (10) ಮತ್ತು ಸ್ಪೆನ್ಸರ್‌ ಜಾನ್ಸನ್‌ ಔಟಾಗದೇ (5) ರನ್‌ ಗಳಿಸಿದರು.

ಸಿಎಸ್‌ಕೆ ಪರ ದೀಪಕ್‌ ಚಾಹರ್‌, ಮುಸ್ತಿಫೀಜುರ್‌ ರೆಹಮಾನ್‌ ಮತ್ತು ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕೆಟ್‌ ಪಡೆದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago