ಕ್ರೀಡೆ

IPL 2024: ಆಟಗಾರರ ರಿಟೆನ್ಷನ್‌ ಬಳಿಕ ಯಾವ ತಂಡದ ಪರ್ಸ್‌ನಲ್ಲಿ ಹೆಚ್ಚು ಹಣವಿದೆ?

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕೆಮರೂನ್‌ ಗ್ರೀನ್‌ ಅವರನ್ನು ಟ್ರೇಡ್‌ ಮಾಡಿಕೊಂಡರೆ, ಮುಂಬೈ ಇಂಡಿಯನ್ಸ್‌ ತಂಡ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇನ್ನು ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ಸೇರಿದ ಬೆನ್ನಲ್ಲೇ ಶುಬ್‌ಮನ್‌ ಗಿಲ್‌ ಹೆಗಲಿಗೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕತ್ವದ ಜವಾಬ್ದಾರಿ ಬಿದ್ದಿದೆ.

ಡಿಸೆಂಬರ್‌ 19ರಂದು ನಡೆಯಲಿರುವ ಹರಾಜಿಗೂ ಮುನ್ನ ಇಷ್ಟೆಲ್ಲಾ ಚಟುವಟಿಕೆಗಳು ನಡೆದಿದ್ದು, ಇದಾದ ಬಳಿಕ ಯಾವ ಫ್ರಾಂಚೈಸಿ ಜೋಳಿಗೆಯಲ್ಲಿ ಎಷ್ಟು ಹಣ ಉಳಿದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಗುಜರಾತ್‌ ಟೈಟನ್ಸ್‌ – 38.15 ಕೋಟಿ ರೂಪಾಯಿಗಳು
ಸನ್‌ ರೈಸರ್ಸ್‌ ಹೈದರಾಬಾದ್‌ – 34 ಕೋಟಿ ರೂಪಾಯಿಗಳು
ಕೊಲ್ಕತ್ತಾ ನೈಟ್‌ ರೈಡರ್ಸ್‌ – 32.7 ಕೋಟಿ ರೂಪಾಯಿಗಳು
ಚೆನ್ನೈ ಸೂಪರ್‌ ಕಿಂಗ್ಸ್‌ – 31.4 ಕೋಟಿ ರೂಪಾಯಿಗಳು
ಪಂಜಾಬ್‌ ಕಿಂಗ್ಸ್‌ – 29.1 ಕೋಟಿ ರೂಪಾಯಿಗಳು
ಡೆಲ್ಲಿ ಕ್ಯಾಪಿಟಲ್ಸ್‌ – 28.95 ಕೋಟಿ ರೂಪಾಯಿಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 23.25 ಕೋಟಿ ರೂಪಾಯಿಗಳು 

ಮುಂಬೈ ಇಂಡಿಯನ್ಸ್‌ – 17.75 ಕೋಟಿ ರೂಪಾಯಿಗಳು 

ರಾಜಸ್ಥಾನ್‌ ರಾಯಲ್ಸ್‌ 14.5 ಕೋಟಿ ರೂಪಾಯಿಗಳು 

ಲಕ್ನೋ ಸೂಪರ್‌ ಜೈಂಟ್ಸ್‌ – 13.15 ಕೋಟಿ ರೂಪಾಯಿಗಳು

andolana

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

10 seconds ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

4 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

37 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

42 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

57 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

1 hour ago