ಕ್ರೀಡೆ

IPL 2024: ಆಟಗಾರರ ರಿಟೆನ್ಷನ್‌ ಬಳಿಕ ಯಾವ ತಂಡದ ಪರ್ಸ್‌ನಲ್ಲಿ ಹೆಚ್ಚು ಹಣವಿದೆ?

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕೆಮರೂನ್‌ ಗ್ರೀನ್‌ ಅವರನ್ನು ಟ್ರೇಡ್‌ ಮಾಡಿಕೊಂಡರೆ, ಮುಂಬೈ ಇಂಡಿಯನ್ಸ್‌ ತಂಡ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇನ್ನು ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ಸೇರಿದ ಬೆನ್ನಲ್ಲೇ ಶುಬ್‌ಮನ್‌ ಗಿಲ್‌ ಹೆಗಲಿಗೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕತ್ವದ ಜವಾಬ್ದಾರಿ ಬಿದ್ದಿದೆ.

ಡಿಸೆಂಬರ್‌ 19ರಂದು ನಡೆಯಲಿರುವ ಹರಾಜಿಗೂ ಮುನ್ನ ಇಷ್ಟೆಲ್ಲಾ ಚಟುವಟಿಕೆಗಳು ನಡೆದಿದ್ದು, ಇದಾದ ಬಳಿಕ ಯಾವ ಫ್ರಾಂಚೈಸಿ ಜೋಳಿಗೆಯಲ್ಲಿ ಎಷ್ಟು ಹಣ ಉಳಿದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಗುಜರಾತ್‌ ಟೈಟನ್ಸ್‌ – 38.15 ಕೋಟಿ ರೂಪಾಯಿಗಳು
ಸನ್‌ ರೈಸರ್ಸ್‌ ಹೈದರಾಬಾದ್‌ – 34 ಕೋಟಿ ರೂಪಾಯಿಗಳು
ಕೊಲ್ಕತ್ತಾ ನೈಟ್‌ ರೈಡರ್ಸ್‌ – 32.7 ಕೋಟಿ ರೂಪಾಯಿಗಳು
ಚೆನ್ನೈ ಸೂಪರ್‌ ಕಿಂಗ್ಸ್‌ – 31.4 ಕೋಟಿ ರೂಪಾಯಿಗಳು
ಪಂಜಾಬ್‌ ಕಿಂಗ್ಸ್‌ – 29.1 ಕೋಟಿ ರೂಪಾಯಿಗಳು
ಡೆಲ್ಲಿ ಕ್ಯಾಪಿಟಲ್ಸ್‌ – 28.95 ಕೋಟಿ ರೂಪಾಯಿಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 23.25 ಕೋಟಿ ರೂಪಾಯಿಗಳು 

ಮುಂಬೈ ಇಂಡಿಯನ್ಸ್‌ – 17.75 ಕೋಟಿ ರೂಪಾಯಿಗಳು 

ರಾಜಸ್ಥಾನ್‌ ರಾಯಲ್ಸ್‌ 14.5 ಕೋಟಿ ರೂಪಾಯಿಗಳು 

ಲಕ್ನೋ ಸೂಪರ್‌ ಜೈಂಟ್ಸ್‌ – 13.15 ಕೋಟಿ ರೂಪಾಯಿಗಳು

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago