ಕ್ರೀಡೆ

IPL 2024: ಆಟಗಾರರ ರಿಟೆನ್ಷನ್‌ ಬಳಿಕ ಯಾವ ತಂಡದ ಪರ್ಸ್‌ನಲ್ಲಿ ಹೆಚ್ಚು ಹಣವಿದೆ?

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕೆಮರೂನ್‌ ಗ್ರೀನ್‌ ಅವರನ್ನು ಟ್ರೇಡ್‌ ಮಾಡಿಕೊಂಡರೆ, ಮುಂಬೈ ಇಂಡಿಯನ್ಸ್‌ ತಂಡ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇನ್ನು ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ಸೇರಿದ ಬೆನ್ನಲ್ಲೇ ಶುಬ್‌ಮನ್‌ ಗಿಲ್‌ ಹೆಗಲಿಗೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕತ್ವದ ಜವಾಬ್ದಾರಿ ಬಿದ್ದಿದೆ.

ಡಿಸೆಂಬರ್‌ 19ರಂದು ನಡೆಯಲಿರುವ ಹರಾಜಿಗೂ ಮುನ್ನ ಇಷ್ಟೆಲ್ಲಾ ಚಟುವಟಿಕೆಗಳು ನಡೆದಿದ್ದು, ಇದಾದ ಬಳಿಕ ಯಾವ ಫ್ರಾಂಚೈಸಿ ಜೋಳಿಗೆಯಲ್ಲಿ ಎಷ್ಟು ಹಣ ಉಳಿದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಗುಜರಾತ್‌ ಟೈಟನ್ಸ್‌ – 38.15 ಕೋಟಿ ರೂಪಾಯಿಗಳು
ಸನ್‌ ರೈಸರ್ಸ್‌ ಹೈದರಾಬಾದ್‌ – 34 ಕೋಟಿ ರೂಪಾಯಿಗಳು
ಕೊಲ್ಕತ್ತಾ ನೈಟ್‌ ರೈಡರ್ಸ್‌ – 32.7 ಕೋಟಿ ರೂಪಾಯಿಗಳು
ಚೆನ್ನೈ ಸೂಪರ್‌ ಕಿಂಗ್ಸ್‌ – 31.4 ಕೋಟಿ ರೂಪಾಯಿಗಳು
ಪಂಜಾಬ್‌ ಕಿಂಗ್ಸ್‌ – 29.1 ಕೋಟಿ ರೂಪಾಯಿಗಳು
ಡೆಲ್ಲಿ ಕ್ಯಾಪಿಟಲ್ಸ್‌ – 28.95 ಕೋಟಿ ರೂಪಾಯಿಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 23.25 ಕೋಟಿ ರೂಪಾಯಿಗಳು 

ಮುಂಬೈ ಇಂಡಿಯನ್ಸ್‌ – 17.75 ಕೋಟಿ ರೂಪಾಯಿಗಳು 

ರಾಜಸ್ಥಾನ್‌ ರಾಯಲ್ಸ್‌ 14.5 ಕೋಟಿ ರೂಪಾಯಿಗಳು 

ಲಕ್ನೋ ಸೂಪರ್‌ ಜೈಂಟ್ಸ್‌ – 13.15 ಕೋಟಿ ರೂಪಾಯಿಗಳು

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago