ಕ್ರೀಡೆ

IPL 2024: ಆಟಗಾರರ ರಿಟೆನ್ಷನ್‌ ಬಳಿಕ ಯಾವ ತಂಡದ ಪರ್ಸ್‌ನಲ್ಲಿ ಹೆಚ್ಚು ಹಣವಿದೆ?

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕೆಮರೂನ್‌ ಗ್ರೀನ್‌ ಅವರನ್ನು ಟ್ರೇಡ್‌ ಮಾಡಿಕೊಂಡರೆ, ಮುಂಬೈ ಇಂಡಿಯನ್ಸ್‌ ತಂಡ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇನ್ನು ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ಸೇರಿದ ಬೆನ್ನಲ್ಲೇ ಶುಬ್‌ಮನ್‌ ಗಿಲ್‌ ಹೆಗಲಿಗೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕತ್ವದ ಜವಾಬ್ದಾರಿ ಬಿದ್ದಿದೆ.

ಡಿಸೆಂಬರ್‌ 19ರಂದು ನಡೆಯಲಿರುವ ಹರಾಜಿಗೂ ಮುನ್ನ ಇಷ್ಟೆಲ್ಲಾ ಚಟುವಟಿಕೆಗಳು ನಡೆದಿದ್ದು, ಇದಾದ ಬಳಿಕ ಯಾವ ಫ್ರಾಂಚೈಸಿ ಜೋಳಿಗೆಯಲ್ಲಿ ಎಷ್ಟು ಹಣ ಉಳಿದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಗುಜರಾತ್‌ ಟೈಟನ್ಸ್‌ – 38.15 ಕೋಟಿ ರೂಪಾಯಿಗಳು
ಸನ್‌ ರೈಸರ್ಸ್‌ ಹೈದರಾಬಾದ್‌ – 34 ಕೋಟಿ ರೂಪಾಯಿಗಳು
ಕೊಲ್ಕತ್ತಾ ನೈಟ್‌ ರೈಡರ್ಸ್‌ – 32.7 ಕೋಟಿ ರೂಪಾಯಿಗಳು
ಚೆನ್ನೈ ಸೂಪರ್‌ ಕಿಂಗ್ಸ್‌ – 31.4 ಕೋಟಿ ರೂಪಾಯಿಗಳು
ಪಂಜಾಬ್‌ ಕಿಂಗ್ಸ್‌ – 29.1 ಕೋಟಿ ರೂಪಾಯಿಗಳು
ಡೆಲ್ಲಿ ಕ್ಯಾಪಿಟಲ್ಸ್‌ – 28.95 ಕೋಟಿ ರೂಪಾಯಿಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು – 23.25 ಕೋಟಿ ರೂಪಾಯಿಗಳು 

ಮುಂಬೈ ಇಂಡಿಯನ್ಸ್‌ – 17.75 ಕೋಟಿ ರೂಪಾಯಿಗಳು 

ರಾಜಸ್ಥಾನ್‌ ರಾಯಲ್ಸ್‌ 14.5 ಕೋಟಿ ರೂಪಾಯಿಗಳು 

ಲಕ್ನೋ ಸೂಪರ್‌ ಜೈಂಟ್ಸ್‌ – 13.15 ಕೋಟಿ ರೂಪಾಯಿಗಳು

andolana

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

7 mins ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

39 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

1 hour ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

6 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

6 hours ago