ಕ್ರೀಡೆ

IPL 2024: ಕೊಹ್ಲಿ ಅರ್ಧಶತಕ, ಕಾರ್ತಿಕ್‌ ಅಬ್ಬರಕ್ಕೆ ತಲೆಬಾಗಿದ ಪಂಜಾಬ್ ; ಗೆಲುವಿನ ಖಾತೆ ತೆರೆದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಬೌಲಿಂಗ್‌ ಆಯ್ದುಕೊಂಡು ಎದುರಾಳಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ ಆರ್‌ಸಿಬಿಗೆ 177 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅರ್ಧಶತಕ ಹಾಗೂ ದಿನೇಶ್‌ ಕಾರ್ತಿಕ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 19.2 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್‌ ಕಲೆಹಾಕಿತು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶಿಖರ್‌ ಧವನ್‌ 45 (37) ಹಾಗೂ ಜಾನಿ ಬೈರ್‌ಸ್ಟೋ 8 (6) ರನ್‌ ಗಳಿಸಿದರು. ಇನ್ನುಳಿದಂತೆ ಪ್ರಭ್‌ಸಿಮ್ರಾನ್‌ ಸಿಂಗ್‌ 25 (17) ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 17 (13) ರನ್‌, ಸ್ಯಾಮ್‌ ಕರನ್‌ 23 (17) ರನ್‌, ಜಿತೇಶ್‌ ಶರ್ಮಾ 27 (20) ರನ್‌, ಶಶಾಂಕ್‌ ಸಿಂಗ್‌ ಅಜೇಯ 21 (8) ಮತ್ತು ಹರ್‌ಪ್ರೀತ್‌ ಬ್ರಾರ್‌ ಅಜೇಯ 2 (2) ರನ್ ಗಳಿಸಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಮೊಹಮ್ಮದ್‌ ಸಿರಾಜ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ತಲಾ 2 ವಿಕೆಟ್‌ ಪಡೆದರೆ, ಯಶ್‌ ದಯಾಳ್‌ ಮತ್ತು ಅಲ್ಜಾರಿ ಜೋಸೆಫ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಫಾಫ್‌ ಡುಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ ಕಣಕ್ಕಿಳಿದರು. ಡುಪ್ಲೆಸಿಸ್‌ 3(7) ರನ್‌ ಗಳಿಸಿ ನಿರಾಸೆ ಮೂಡಿಸಿದರು. ನಂತರ ಕಣಕ್ಕಿಳಿದ ಕ್ಯಾಮೆರಾನ್‌ ಗ್ರೀನ್‌ ಸಹ 3 (5) ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ರಜತ್‌ ಪಟಿದಾರ್‌ 18 (18) ರನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 3(5) ರನ್‌ ಮತ್ತು ಅನುಜ್‌ ರಾವತ್‌ 11 (14) ರನ್‌ ಗಳಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಏಕಾಂಗಿ ಹೋರಾಟ ನಡೆಸಿದ ವಿರಾಟ್‌ ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 77 ರನ್‌ ಗಳಿಸಿ ಔಟ್‌ ಆದರು. ಕೊಹ್ಲಿ ಔಟ್‌ ಆದ ಬಳಿಕ ಏಳನೇ ವಿಕೆಟ್‌ಗೆ ಜತೆಯಾದ ದಿನೇಶ್‌ ಕಾರ್ತಿಕ್‌ ಹಾಗೂ ಮಹಿಪಾಲ್‌ ಲೊಮ್ರೊರ್‌ ಜೋಡಿ 18 ಎಸೆತಗಳಿಗೆ 48 ರನ್‌ಗಳ ಜತೆಯಾಟವಾಡುವ ಮೂಲಕ ಆರ್‌ಸಿಬಿಗೆ ಗೆಲುವು ತಂದಿಟ್ಟರು. ಲೊಮ್ರೊರ್‌ ಅಜೇಯ 17(8) ರನ್‌ ಗಳಿಸಿದರೆ, ದಿನೇಶ್‌ ಕಾರ್ತಿಕ್‌ 10 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ ಅಜೇಯ 28 ರನ್‌ ಬಾರಿಸಿ ಅಬ್ಬರಿಸಿದರು.

ಪಂಜಾಬ್‌ ಕಿಂಗ್ಸ್‌ ಪರ ಕಗಿಸೊ ರಬಾಡಾ ಹಾಗೂ ಹರ್‌ಪ್ರೀತ್‌ ಬ್ರಾರ್‌ ತಲಾ ಎರಡು ವಿಕೆಟ್‌ ಪಡೆದರೆ, ಹರ್ಷಲ್‌ ಪಟೇಲ್‌ ಹಾಗೂ ಸಾಮ್‌ ಕರನ್‌ ತಲಾ ಒಂದೊಂದು ವಿಕೆಟ್‌ ಪಡೆದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

9 mins ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

10 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

11 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

11 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

12 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

12 hours ago