ಕ್ರೀಡೆ

IPL 2024: ರಾಜಸ್ಥಾನ್‌ ರಾಯಲ್ಸ್‌ ಮಣಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ಸಾಧಿಸುವ ಮೂಲಕ ಪ್ಲೇಆಫ್‌ಗೆ ಮತ್ತಷ್ಟು ಸನಿಹವಾಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ರಿಯಾನ್‌ ಪರಾಗ್‌ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 141 ರನ್‌ ಕಲೆಹಾಕುವ ಮೂಲಕ ಚೆನ್ನೈ ತಂಡಕ್ಕೆ 142 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌ 18.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 145 ರನ್‌ ಕಲೆಹಾಕಿತು.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ 24 (21) ರನ್‌ ಮತ್ತು ಜೋಸ್‌ ಬಟ್ಲರ್‌ 21 (25) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸಂಜು ಸ್ಯಾಮ್ಸನ್‌ 15 (19) ರನ್‌, ಧ್ರುವ್‌ ಜುರೆಲ್‌ 28 (18) ರನ್‌, ಶುಭಮ್‌ ದುಬೆ ಡಕ್‌ಔಟ್‌, ರವಿಚಂದ್ರನ್‌ ಅಶ್ವಿನ್‌ ಅಜೇಯ 1 (1) ರನ್‌ ಮತ್ತು ರಿಯಾನ್‌ ಪರಾಗ್‌ ಅಜೇಯ 47 (35) ರನ್‌ ಗಳಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಸಿಮರ್‌ಜೀತ್‌ ಸಿಂಗ್‌ 3 ಮತ್ತು ತುಷಾರ್‌ ದೇಶಪಾಂಡೆ 2 ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ 27 (18) ರನ್‌ ಮತ್ತು ನಾಯಕ ರುತುರಾಜ್‌ ಗಾಯಕ್ವಾಡ್‌ ಅಜೇಯ 42 (41) ರನ್‌ ಗಳಿಸಿದರು. ಇನ್ನುಳಿದಂತೆ ಡೇರಿಲ್‌ ಮಿಚೆಲ್‌ 22 (13) ರನ್‌, ಮೊಯಿನ್‌ ಅಲಿ 10 (13) ರನ್‌, ಶಿವಮ್‌ ದುಬೆ 18 (11) ರನ್‌, ರವೀಂದ್ರ ಜಡೇಜಾ 5 (7) ರನ್‌ ಮತ್ತು ಸಮೀರ್‌ ರಿಜ್ವಿ ಅಜೇಯ 15 (8) ರನ್‌ ಗಳಿಸಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌, ನಾಂದ್ರೆ ಬರ್ಗರ್‌ ಮತ್ತು ಯುಜ್ವೇಂದ್ರ ಚಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago