ಕ್ರೀಡೆ

IPL 2024: ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸಿಎಸ್‌ಕೆಗೆ ಗೆಲುವು

ಚೆನ್ನೈ: ಇಲ್ಲಿನ ಎಂಎ ಚಿದಂಬಂರಂ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 173 ರನ್‌ ಕಲೆಹಾಕಿ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 174 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌ 18.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿತು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಇನ್ನಿಂಗ್ಸ್‌: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 21 (20) ಹಾಗೂ ನಾಯಕ ಫಾಫ್‌ ಡು ಪ್ಲೆಸಿಸ್‌ 35 (23) ರನ್ ಗಳಿಸಿದರು. ಭಾರೀ ನಿರೀಕ್ಷೆ ಹುಟ್ಟಿಸಿದ್ದ ರಜತ್‌ ಪಾಟಿದಾರ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಇಬ್ಬರೂ ಸಹ ಡಕ್‌ಔಟ್‌ ಆಗುವ ಮೂಲಕ ನಿರಾಸೆ ಮೂಡಿಸಿದರು. ಬಳಿಕ ಕಣಕ್ಕಿಳಿದ ಕ್ಯಾಮೆರಾನ್‌ ಗ್ರೀನ್‌ 18 (22) ರನ್‌ ಕಲೆಹಾಕಿದರು. ಹೀಗೆ 11.4 ಓವರ್‌ಗಳಲ್ಲಿ ಕೇವಲ 78 ರನ್‌ಗಳಿಗೆ ತನ್ನ 5 ವಿಕೆಟ್‌ ಕಳೆದುಕೊಂಡಿದ್ದ ಆರ್‌ಸಿಬಿಗೆ ಆರನೇ ವಿಕೆಟ್‌ಗೆ ಜತೆಯಾದ ಅನುಜ್‌ ರಾವತ್‌ ಹಾಗೂ ದಿನೇಶ್‌ ಕಾರ್ತಿಕ್‌ ಕೊನೆಯ 50 ಎಸೆತಗಳಲ್ಲಿ 95 ರನ್‌ಗಳ ಜತೆಯಾಟವಾಡುವುದರ ಮೂಲಕ ಆಸರೆಯಾದರು. ಅನುಜ್ ರಾವತ್‌ 25 ಎಸೆತಗಳಲ್ಲಿ 48 ರನ್‌ ಕಲೆಹಾಕಿ ಕೊನೆಯ ಎಸೆತದಲ್ಲಿ ರನ್‌ಔಟ್‌ ಆದರೆ, ದಿನೇಶ್‌ ಕಾರ್ತಿಕ್‌ 26 ಎಸೆತಗಳಲ್ಲಿ ಅಜೇಯ 38 ರನ್‌ ಗಳಿಸಿದರು. ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮುಸ್ತಫಿಜರ್‌ ರಹಮಾನ್‌ 4 ವಿಕೆಟ್‌ ಪಡೆದರೆ, ದೀಪಕ್‌ ಚಹರ್‌ ಒಂದು ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಋತುರಾಜ್‌ ಗಾಯಕ್ವಾಡ್‌ ಹಾಗೂ ರಚಿನ್‌ ರವೀಂದ್ರ ಕಣಕ್ಕಿಳಿದರು. ಗಾಯಕ್ವಾಡ್‌ 15 (15) ರನ್‌ ಗಳಿಸಿದರೆ, ರಚಿನ್‌ ರವೀಂದ್ರ 15 ಎಸೆತಗಳಲ್ಲಿ 37 ರನ್‌ ಬಾರಿಸಿ ಉತ್ತಮ ಆರಂಭ ನೀಡಿದರು. ಇನ್ನುಳಿದಂತೆ ಅಜಿಂಕ್ಯಾ ರಹಾನೆ 27 (19), ಡೆರಿಲ್‌ ಮಿಚೆಲ್‌ 22 (18), ಶಿವಮ್‌ ದುಬೆ ಅಜೇಯ 34 (27) ಮತ್ತು ರವೀಂದ್ರ ಜಡೇಜಾ ಅಜೇಯ 25 (17) ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕ್ಯಾಮೆರಾನ್‌ ಗ್ರೀನ್‌ 2 ವಿಕೆಟ್‌, ಯಶ್‌ ದಯಾಳ್‌ ಹಾಗೂ ಕರ್ಣ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago