ಕ್ರೀಡೆ

IPL 2024: ಪ್ಲೇಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ; ಇದು ಆರ್‌ಸಿಬಿಯ ಹೊಸ ಅಧ್ಯಯ ಎಂದ ಸಿಎಂ

ಬೆಂಗಳೂರು: ನಿನ್ನೆ ನಡೆದ ಐಪಿಎಲ್‌ ಸೀನಸ್‌ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು.

ಟೂರ್ನಿಯಲ್ಲಿ ಸತತ 6 ಪಂದ್ಯಗಳನ್ನು ಸೋತು, ಬಳಿಕ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಯ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಪ್ರದರ್ಶನದ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿರುವ ಸಿಎಂ ಸಿದ್ದರಾಮಯ್ಯ, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಬಿ ಪ್ಲೇಆಫ್‌ಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದು, ಪ್ರತಿ ಕ್ಷಣವನ್ನು ಆಸ್ವಾದಿಸಿದೆ. ನಮ್ಮ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಕ್ಕೆ ಸಾಕ್ಷಿಯಾಗಿದ್ದು ಖುಷಿಕೊಟ್ಟಿದೆ. ಇದು ಆರ್‌ಸಿಬಿಯ ಹೊಸ ಅಧ್ಯಯ ಎಂದು ಬರೆದುಕೊಂಡಿದ್ದಾರೆ.

https://x.com/siddaramaiah/status/1791904691929927867

ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ. ಪರಮೇಶ್ವರ್‌, ಎಚ್‌.ಸಿ ಮಹದೇವಪ್ಪ ಸೇರಿದಂತೆ ಹಲವರು ಸಾಥ್‌ ನೀಡಿದರು.

ಫ್ಯಾನ್ಸ್‌ಗೆ ಕೃತಜ್ಞತೆ ಸಲ್ಲಿಸಿದ ಆರ್‌ಸಿಬಿ: ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನದಿಂದ ಹಿಡಿದು ಪ್ಲೇಆಫ್‌ಗೆ ಕ್ವಾಲಿಫೈ ಆದ ಆರ್‌ಸಿಬಿ ತನ್ನ ಅಪಾರ ಅಭಿಮಾನಿಗಳಿಗೆ ಸ್ಟೇಡಿಯಂನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪಂದ್ಯದ ಬಳಿಕ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ತಂಡ ಧನ್ಯವಾದ ಅರ್ಪಿಸಿತು.

ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ತಂಡಕ್ಕೆ ತೋರಿದ ಅಭೂತಪೂರ್ವ ಬೆಂಬಲದ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಮಧ್ಯರಾತ್ರಿ 1.30 ಗಂಟೆ ಸಮಯದಲ್ಲಿ ತಂಡದ ಆಟಗಾರರು ಬಸ್‌ ನಲ್ಲಿ ಪ್ರಯಾಣಿಸುವ ವೇಳೆ ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳು ಆರ್‌ಸಿಬಿ ಆರ್‌ಸಿಬಿ ಎಂದು ಕೂಗುತ್ತಾ ತಂಡದ ಗೆಲುವನ್ನು ಸಂಭ್ರಮಿಸಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

https://www.instagram.com/reel/C7H-89sBuXF/?igsh=eTR3NnE2eXZldXNt

ಇನ್ನು ರಾಜ್ಯಾದ್ಯಂತ ಅಭಿಮಾನಿಗಳು ಪಂದ್ಯ ಗೆದ್ದು, ಕ್ವಾಲಿಫೈ ಆದ ಖುಷಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.

ಇನ್ನು ಆರ್‌ಸಬಿ ತನ್ನ ಮೊದಲ ಕ್ವಾಲಿಫೈ ಪಂದ್ಯವನ್ನು ಬುಧವಾರ ರಾಜಸ್ಥಾನ್‌ ರಾಯಲ್ಸ್‌ ಇಲ್ಲ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

20 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

28 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago