ಕ್ರೀಡೆ

IPL 2024: ಪ್ಲೇಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ; ಇದು ಆರ್‌ಸಿಬಿಯ ಹೊಸ ಅಧ್ಯಯ ಎಂದ ಸಿಎಂ

ಬೆಂಗಳೂರು: ನಿನ್ನೆ ನಡೆದ ಐಪಿಎಲ್‌ ಸೀನಸ್‌ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು.

ಟೂರ್ನಿಯಲ್ಲಿ ಸತತ 6 ಪಂದ್ಯಗಳನ್ನು ಸೋತು, ಬಳಿಕ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಯ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಪ್ರದರ್ಶನದ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿರುವ ಸಿಎಂ ಸಿದ್ದರಾಮಯ್ಯ, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಬಿ ಪ್ಲೇಆಫ್‌ಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದು, ಪ್ರತಿ ಕ್ಷಣವನ್ನು ಆಸ್ವಾದಿಸಿದೆ. ನಮ್ಮ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಕ್ಕೆ ಸಾಕ್ಷಿಯಾಗಿದ್ದು ಖುಷಿಕೊಟ್ಟಿದೆ. ಇದು ಆರ್‌ಸಿಬಿಯ ಹೊಸ ಅಧ್ಯಯ ಎಂದು ಬರೆದುಕೊಂಡಿದ್ದಾರೆ.

https://x.com/siddaramaiah/status/1791904691929927867

ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ. ಪರಮೇಶ್ವರ್‌, ಎಚ್‌.ಸಿ ಮಹದೇವಪ್ಪ ಸೇರಿದಂತೆ ಹಲವರು ಸಾಥ್‌ ನೀಡಿದರು.

ಫ್ಯಾನ್ಸ್‌ಗೆ ಕೃತಜ್ಞತೆ ಸಲ್ಲಿಸಿದ ಆರ್‌ಸಿಬಿ: ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನದಿಂದ ಹಿಡಿದು ಪ್ಲೇಆಫ್‌ಗೆ ಕ್ವಾಲಿಫೈ ಆದ ಆರ್‌ಸಿಬಿ ತನ್ನ ಅಪಾರ ಅಭಿಮಾನಿಗಳಿಗೆ ಸ್ಟೇಡಿಯಂನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪಂದ್ಯದ ಬಳಿಕ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ತಂಡ ಧನ್ಯವಾದ ಅರ್ಪಿಸಿತು.

ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ತಂಡಕ್ಕೆ ತೋರಿದ ಅಭೂತಪೂರ್ವ ಬೆಂಬಲದ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಮಧ್ಯರಾತ್ರಿ 1.30 ಗಂಟೆ ಸಮಯದಲ್ಲಿ ತಂಡದ ಆಟಗಾರರು ಬಸ್‌ ನಲ್ಲಿ ಪ್ರಯಾಣಿಸುವ ವೇಳೆ ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳು ಆರ್‌ಸಿಬಿ ಆರ್‌ಸಿಬಿ ಎಂದು ಕೂಗುತ್ತಾ ತಂಡದ ಗೆಲುವನ್ನು ಸಂಭ್ರಮಿಸಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

https://www.instagram.com/reel/C7H-89sBuXF/?igsh=eTR3NnE2eXZldXNt

ಇನ್ನು ರಾಜ್ಯಾದ್ಯಂತ ಅಭಿಮಾನಿಗಳು ಪಂದ್ಯ ಗೆದ್ದು, ಕ್ವಾಲಿಫೈ ಆದ ಖುಷಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.

ಇನ್ನು ಆರ್‌ಸಬಿ ತನ್ನ ಮೊದಲ ಕ್ವಾಲಿಫೈ ಪಂದ್ಯವನ್ನು ಬುಧವಾರ ರಾಜಸ್ಥಾನ್‌ ರಾಯಲ್ಸ್‌ ಇಲ್ಲ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

2 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

6 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

6 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

7 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

8 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

9 hours ago