ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಸೀನಸ್ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈಸೂಪರ್ ಕಿಂಗ್ಸ್ ತಂಡದ ವಿರುದ್ಧ 27ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು.
ಟೂರ್ನಿಯಲ್ಲಿ ಸತತ 6 ಪಂದ್ಯಗಳನ್ನು ಸೋತು, ಬಳಿಕ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ಗೆ ಲಗ್ಗೆಯಿಟ್ಟ ಆರ್ಸಿಬಿಯ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ ಪ್ರದರ್ಶನದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿರುವ ಸಿಎಂ ಸಿದ್ದರಾಮಯ್ಯ, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್ಸಿಬಿ ಪ್ಲೇಆಫ್ಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದು, ಪ್ರತಿ ಕ್ಷಣವನ್ನು ಆಸ್ವಾದಿಸಿದೆ. ನಮ್ಮ ಆರ್ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಕ್ಕೆ ಸಾಕ್ಷಿಯಾಗಿದ್ದು ಖುಷಿಕೊಟ್ಟಿದೆ. ಇದು ಆರ್ಸಿಬಿಯ ಹೊಸ ಅಧ್ಯಯ ಎಂದು ಬರೆದುಕೊಂಡಿದ್ದಾರೆ.
https://x.com/siddaramaiah/status/1791904691929927867
ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ. ಪರಮೇಶ್ವರ್, ಎಚ್.ಸಿ ಮಹದೇವಪ್ಪ ಸೇರಿದಂತೆ ಹಲವರು ಸಾಥ್ ನೀಡಿದರು.
ಫ್ಯಾನ್ಸ್ಗೆ ಕೃತಜ್ಞತೆ ಸಲ್ಲಿಸಿದ ಆರ್ಸಿಬಿ: ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಿಂದ ಹಿಡಿದು ಪ್ಲೇಆಫ್ಗೆ ಕ್ವಾಲಿಫೈ ಆದ ಆರ್ಸಿಬಿ ತನ್ನ ಅಪಾರ ಅಭಿಮಾನಿಗಳಿಗೆ ಸ್ಟೇಡಿಯಂನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪಂದ್ಯದ ಬಳಿಕ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ತಂಡ ಧನ್ಯವಾದ ಅರ್ಪಿಸಿತು.
ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ತಂಡಕ್ಕೆ ತೋರಿದ ಅಭೂತಪೂರ್ವ ಬೆಂಬಲದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಮಧ್ಯರಾತ್ರಿ 1.30 ಗಂಟೆ ಸಮಯದಲ್ಲಿ ತಂಡದ ಆಟಗಾರರು ಬಸ್ ನಲ್ಲಿ ಪ್ರಯಾಣಿಸುವ ವೇಳೆ ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳು ಆರ್ಸಿಬಿ ಆರ್ಸಿಬಿ ಎಂದು ಕೂಗುತ್ತಾ ತಂಡದ ಗೆಲುವನ್ನು ಸಂಭ್ರಮಿಸಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
https://www.instagram.com/reel/C7H-89sBuXF/?igsh=eTR3NnE2eXZldXNt
ಇನ್ನು ರಾಜ್ಯಾದ್ಯಂತ ಅಭಿಮಾನಿಗಳು ಪಂದ್ಯ ಗೆದ್ದು, ಕ್ವಾಲಿಫೈ ಆದ ಖುಷಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.
ಇನ್ನು ಆರ್ಸಬಿ ತನ್ನ ಮೊದಲ ಕ್ವಾಲಿಫೈ ಪಂದ್ಯವನ್ನು ಬುಧವಾರ ರಾಜಸ್ಥಾನ್ ರಾಯಲ್ಸ್ ಇಲ್ಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…