ಕ್ರೀಡೆ

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 137 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಸಿಎಸ್‌ಕೆ 17.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಇತ್ತ ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಇನ್ನಿಂಗ್ಸ್‌ ಆರಂಭದ ಮೊದಲ ಬಾಲ್‌ನಲ್ಲೇ ಆಘಾತ ಎದುರಾಯಿತು. ಫಿಲ್ ಸಾಲ್ಟ್ 0(1) ನಿರ್ಗಮಿಸಿದರು. ನಂತರ ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18) ತಂಡಕ್ಕೆ ಚೇತರಿಕೆ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ 34(32) ರನ್‌ ಗಳಿಸಿದ್ದೇ ತಂಡದ ಪರ ಗರಿಷ್ಠ. ಉಳಿದಂತೆ ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. ಕೆಕೆಆರ್‌ಗೆ ಮಧ್ಯಮ ಕ್ರಮಾಂಕ ಕೈ ಹಿಡಿಯುವಲ್ಲಿ ವಿಫಲವಾಗಿ ತಂಡ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾ 3, ಮುಸ್ತಫಿಜುರ್ ರೆಹಮಾನ್ 2 ಮತ್ತು ತೀಕ್ಷಣ 1 ವಿಕೆಟ್‌ ಪಡೆದು ಮಿಂಚಿದರು.

ಸಿಎಸ್‌ಕೆ ಇನ್ನಿಂಗ್ಸ್‌: ಸಿಎಸ್‌ಕೆ ಪರ ನಾಯಕ ಋತುರಾಜ್‌ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಋತುರಾಜ್‌ ಔಟಾಗದೇ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 67 ರನ್‌ ಕಲೆಹಾಕಿ ಕೊನೆವರೆಗು ನಿಂತು ಪಂದ್ಯ ಮುಗಿಸಿದರು. ಉಳಿದಂತೆ ರಚಿನ್‌ ರವೀಂದ್ರ 15(8), ಡೇರಿಯಲ್‌ ಮಿಚೆಲ್‌ 25(19), ಶಿವಂ ದುಬೆ 28(18) ಮತ್ತು ಎಂ.ಎಸ್‌ ಧೋನಿ 1(3) ರನ್‌ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಕೆಕೆಆರ್‌ ಪರ ಅರೋರ 2, ಸುನೀಲ್‌ ನರೈನ್‌ ಒಂದು ವಿಕೆಟ್‌ ಕಿತ್ತರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

3 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

28 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

52 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

55 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

1 hour ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

1 hour ago